ನವದೆಹಲಿ: ಸಂಸತ್ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ.
ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್ ರೆಡ್ಡಿ ವಿರುದ್ಧ ಎನ್ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಆಯ್ಕೆಯಾಗುವುದು ಖಚಿತವಾಗಿದೆ.
ಲೋಕಸಭೆಯ 543, ರಾಜ್ಯಸಭೆಯ 245 ಸದಸ್ಯರು ಸೇರಿ 788 ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇವರನ್ನು ಎಲೆಕ್ಟ್ರೋರಲ್ ಕಾಲೇಜ್ ಎಂದು ಕರೆಯಲಾಗುತ್ತದೆ. ಪ್ರಸ್ತುತ ಲೋಕಸಭೆಯಲ್ಲಿ ಒಂದು ರಾಜ್ಯಸಭೆಯಲ್ಲಿ ಆರು ಸ್ಥಾನ ಖಾಲಿಯಿದ್ದು, 781 ಸಂಸದರು ಮತ ಚಲಾಯಿಸಲಿದ್ದಾರೆ.
ಚುನಾವಣೆಯಲ್ಲಿ ಮತಪತ್ರದ ಮೂಲಕ ಮತದಾನ ನಡೆಯುತ್ತದೆ. ಗೌಪ್ಯ ಮತದಾನ ನಡೆಯಲಿದ್ದು, ಸಂಸದರು ಯಾವ ಅಭ್ಯರ್ಥಿಗೆ ಬೇಕಾದರೂ ಮತ ಹಾಕಬಹುದು. ಆಡಳಿತ ಹಾಗೂ ವಿಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಪೈಕಿ ಸರಳ ಬಹುಮತ ಪಡೆದವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಲಿದ್ದಾರೆ.
ವಿಜೇತರಾಗಲು ಕನಿಷ್ಠ 391 ಮತಗಳ ಅಗತ್ಯವಿದೆ. ಇಂದೇ ಮತ ಎಣಿಕೆ ನಡೆದು ವಿಜೇತರ ಘೋಷಣೆಯಾಗಲಿದೆ. ಎನ್ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್, ಇಂಡಿಯಾ ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಸ್ಪರ್ಧಿಸಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…