ದೇಶ- ವಿದೇಶ

2028ಕ್ಕೂ ನನ್ನ ನೇತೃತ್ವದಲ್ಲೇ ಚುನಾವಣೆ : ಸಿಎಂ

ಹೊಸದಿಲ್ಲಿ : ಮುಂಬರುವ 2028ರಲ್ಲೂ ನನ್ನ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಷಯಕ್ಕೆ ತೆರೆ ಎಳೆದಿದ್ದಾರೆ.

ಗುರುವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಪುನರುಚ್ಚರಿಸಿದ್ದೇವೆ ಎಂದರು.

ಕರ್ನಾಟಕದ ಮುಖ್ಯಮಂತ್ರಿ ನಾನೇ. ಡಿ.ಕೆ.ಶಿವಕುಮಾರ್ ಆಗಲಿ ಅಥವಾ ಶಾಸಕರು ಯಾರೇ ಆಗಲಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇಟ್ಟುಕೊಂಡಿದ್ದರೆ ಅದರಲ್ಲ ತಪ್ಪೇನಿಲ್ಲ ಎಂದರು.

ಸಚಿವ ಸಂಪುಟ ಪುನರ್ರಚನೆ ಬಗ್ಗೆ ಚರ್ಚೆಯಿಲ್ಲ:-  ಸಚಿವ ಸಂಪುಟ ಪುನರ್ರಚನೆ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡುತ್ತಾ, ಸಚಿವ ಸಂಪುಟ ಪುನರ್ರಚನೆ ಬಗ್ಗೆ ಯಾವುದೇ ಚರ್ಚೆಯಾಗುವುದಿಲ್ಲ ಎಂದರು.

ಜನೌಷಧಿ ಕೇಂದ್ರ ಬಂದ್-ಮಾಹಿತಿ ಪಡೆದು ಪ್ರತಿಕ್ರಿಯೆ:- ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಜನೌಷಧಿ ಕೇಂದ್ರ ಬಂದ್ ಮಾಡಿರುವ ಆದೇಶಕ್ಕೆ ಹೈಕೋರ್ಟ್ ತಡೆನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಲಾಗುವುದು ಎಂದರು.

ಸಚಿವಸಂಪುಟದಲ್ಲಿ ಚರ್ಚೆಯಾಗಿಲ್ಲ:- ಸಿಬಿಎಸ್ ಸಿ ಕನ್ನಡ ಪತ್ರಿಕೆಯನ್ನು 125 ಅಂಕಗಳಿಂದ 100 ಕ್ಕೆ ಇಳಿಸುವ ಪ್ರಸ್ತಾಪ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಚಿವ ಸಂಪುಟದಲ್ಲಿ ಮಂಡನೆಯಾಗಲೀ, ಚರ್ಚೆಯಾಗಲೀ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಗ್ಯಾರಂಟಿ ಯೋಜನೆಗಳು ಸಮಾಜದ ಬಡವರ ಪರಿಸ್ಥಿತಿಯನ್ನು ಉತ್ತಮಪಡಿಸಿದೆ:- ರಂಭಾಪುರಿ ಮಠದ ಸ್ವಾಮೀಜಿಗಳು ಗ್ಯಾರಂಟಿ ಯೋಜನೆಗಳಿಂದಾಗಿ ಜನ ಸೋಮಾರಿಗಳಾಗಿದ್ದಾರೆ ಎಂದು ಹೇಳೀಕೆ ನೀಡಿರುವ ಬಗ್ಗೆ ಮಾತನಾಡಿ ಯಾವ ಹಿನ್ನೆಲೆ ಅಥವಾ ಸಂದರ್ಭದಲ್ಲಿ ಸ್ವಾಮೀಜಿಗಳು ಈ ರೀತಿ ಹೇಳಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ಹೆಣ್ಣುಮಕ್ಕಳು ಶಕ್ತಿ ಯೋಜನೆಯಡಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಿದರೆ ಸೋಮಾರಿಗಳಾಗುತ್ತಾರೆಯೇ ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ 7 ಕೋಟಿ ಜನರಿದ್ದು ಅದರ ಅರ್ಧ ಭಾಗವಿರುವ 3.5 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣಿಸಿದರೆ ಹಣ ಉಳಿತಾಯವಾಗುತ್ತದೆ. ಅವರ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ 2000 ರೂ.ಗಳನ್ನು ಒದಗಿಸಿದರೆ ಅವರು ಮಕ್ಕಳನ್ನು ಓದಿಸುತ್ತಾರೆ ಎಂದರು.

ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದಿದ್ದರು. ಅವರು ಮೇಧಾವಿಗಳಾಗಿದ್ದು, ಅವರು ಹೇಳಿದ್ದನ್ನು ಅಲ್ಲಗಳೆಯಲಾಗುವುದಿಲ್ಲ. ಜಾತಿ ಹೋಗಬೇಕಾದರೆ ಆರ್ಥಿಕವಾಗಿ ಸಬಲರಾಗಲು, ಸಮಾನತೆ ತರಲು ಸಮಾಜಿಕ ಆರ್ಥಿಕ ಶಕ್ತಿ ದೊರಕಬೇಕು ಎಂದರು. ದೇಶ ಕಂಡ ಮೇಧಾವಿಗಳಲ್ಲಿ ಅಪ್ರತಿಮ ಮೇಧಾವಿಗಳಾದ ಅಂಬೇಡ್ಕರ್ ಅವರು ದೇಶದಲ್ಲಿನ ಅಸಮಾನತೆ ಹೋಗದೇಹೋದರೆ ಪ್ರಜಾಪ್ರಭುತ್ವ ಯಶಸ್ವಿಯಾಗುವುದಿಲ್ಲ. ಸಮಸಮಾಜದ ನಿರ್ಮಾಣಕ್ಕೆ ಜಾತೀಯತೆ, ವರ್ಗ ವ್ಯವಸ್ಥೆ ಹೋಗಬೇಕು ಎಂದಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆಗಳು ಸಮಾಜದ ಬಡವರ ಪರಿಸ್ಥಿತಿಯನ್ನು ಉತ್ತಮಪಡಿಸಬಹುದು ಎಂದು ಸಾಕಷ್ಟು ಚರ್ಚೆಯ ನಂತರ ನಿರ್ಣಯ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

2 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

2 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

2 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

2 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

2 hours ago