ಹೊಸದಿಲ್ಲಿ: ದೇಶದಲ್ಲಿ 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯೂ ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.
ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಕಳೆದ ದಶಕಗಳಲ್ಲಿ ಸವಾಲು ಮತ್ತು ಪ್ರತಿ ಪರೀಕ್ಷೆಯನ್ನು ಎದುರಿಸಿದೆ. 1975 ರ ತುರ್ತು ಪರಿಸ್ಥಿತಿಯಿಂದ ಇಡೀ ದೇಶವು ಆಕ್ರೋಶಗೊಂಡಿತ್ತು. ಅಂತಹ ಅಸಂವಿಧಾನಿಕ ಶಕ್ತಿಗಳ ವಿರುದ್ಧ ದೇಶವು ಜಯಶಾಲಿಯೂ ಆಯಿತು ಜತೆಗೆ ಗಣರಾಜ್ಯ ಮತ್ತಷ್ಟು ಬಲಿಷ್ಠಗೊಂಡಿತು ಎಂದು ಹೇಳಿದರು.
ಸಂವಿಧಾನವು ಕೇವಲ ಆಡಳಿತ ಮಾಧ್ಯಮವಲ್ಲ, ಬದಲಿಗೆ ಸಾರ್ವಜನಿಕ ಪ್ರಜ್ಞೆಯ ಭಾಗವಾಗುವುದನ್ನು ಖಚಿತಪಡಿಸಿಕೊಳ್ಳಲು ಮಾಡುತ್ತಿದೆ. ಈ ಉದ್ದೇಶ ಗಮನದಲ್ಲಿಟ್ಟುಕೊಂಡು, ನಮ್ಮ ಸರ್ಕಾರವು ನವೆಂಬರ್ 26 ಅನ್ನು ಸಂವಿಧಾನ ದಿನವಾಗಿ ಆಚರಿಸಲು ಆರಂಭಿಸಿದೆ ಎಂದು ಮುರ್ಮು ಹೇಳಿದರು.
ಉಪ ರಾಷ್ಟ್ರಪತಿ ಜನದೀಪ್ ಧನಕರ್ ಅವರು ಕೂಡ ತುರ್ತು ಪರಿಸ್ಥಿತಿಯ ಬಗ್ಗೆ ರಾಷ್ಟ್ರಪತಿ ಹೇಳಿಕೆಯನ್ನು ಪುನರುಚ್ಚರಿಸಿದ್ದು, ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ದಾಳಿ ಎಂದರು.
ಆಗಿನ ಪ್ರಧಾನಿ ಇಂದಿರಾಗಾಂಧಿ ಅವರ ಸಲಹೆಯಂತೆ 1975ರ ಜೂನ್ 25ರ ಮಧ್ಯರಾತ್ರಿ ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹಮದ್ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…