ದೇಶ- ವಿದೇಶ

ತುರ್ತು ಪರಿಸ್ಥಿತಿ ಇಡೀ ದೇಶವನ್ನು ಜೈಲಾಗಿ ಪರಿವರ್ತಿಸಿತ್ತು: ದೆಹಲಿ ಸಿಎಂ ರೇಖಾ ಗುಪ್ತಾ

ನವದೆಹಲಿ: ಸಂವಿಧಾನದವನ್ನು ಜೇಬಿನಲ್ಲಿ ಇಟ್ಟುಕೊಂಡವರು ತಮ್ಮ ಸರ್ಕಾರದ ಅವಧಿಯಲ್ಲೇ ಅದನ್ನು ಕೊಂದದ್ದು ತಾವೇ ಎಂಬುದನ್ನು ಮನನ ಮಾಡಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಕುರಿತು ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಇಡೀ ದೇಶವನ್ನು ಜೈಲಾಗಿ ಪರಿವರ್ತಿಸಿತ್ತು. ನಾಗರಿಕರ ಸ್ವಾತಂತ್ರವನ್ನು ಕಟ್ಟಿ ಹಾಕಲಾಗಿತ್ತು. ವಿಚಾರಣೆ ಮಾಡದೆಯೇ ವಿನಾಕಾರಣ ವಿರೋಧ ಪಕ್ಷಗಳನ್ನು ಜೈಲಿನಲ್ಲಿಡಲಾಯಿತು. ಇಂದಿರಾ ಗಾಂಧಿಯವರ ಆಳ್ವಿಕೆಯಲ್ಲಿ ಒಂದು ಅಧಿಕಾರದ ಸ್ಥಾನವನ್ನು ರಕ್ಷಿಸಲು ಎಲ್ಲಾ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು ಎಂದು ದೂರಿದರು.

ಪ್ರತಿ ಜೂನ್.25ರಂದು ನಾವು ತುರ್ತು ಪರಿಸ್ಥಿತಿಯನ್ನು ಏಕೆ ನೆನಪಿಸಿಕೊಳ್ಳುತ್ತೇವೆ ಎಂದು ಕೆಲವರು ಕೇಳುತ್ತಾರೆ. ಇದು ರಾವಣನಾಗಬಾರದು ಎಂದು ನೆನಪಿಸಲು ಪ್ರತಿ ವರ್ಷ ಪ್ರದರ್ಶಿಸಲಾಗುವ ರಾಮಲೀಲಾದಂತಿದೆ. ಯಾವುದೇ ನಾಯಕ ಅಥವಾ ಸರ್ಕಾರವು ಅದನ್ನು ಪುನರಾವರ್ತಿಸಲು ಎಂದಿಗೂ ಧೈರ್ಯ ಮಾಡದಂತೆ ನಾವು ತುರ್ತು ಪರಿಸ್ಥಿತಿಯನ್ನು ನೆನಪಿಸಿಕೊಳ್ಳುತ್ತೇವೆ ಎಂದರು.

ಮುಖ್ಯಮಂತ್ರಿ ಮಹಿಳಾ ರಾಜಕೀಯ ಕಾರ್ಯಕರ್ತರು ಹಿಂದಿನ ಮತ್ತು ಪ್ರಸ್ತುತ ರಾಜಕೀಯ ಘಟನೆಗಳ ಬಗ್ಗೆ ತಮನ್ನು ತಾವು ಶಿಕ್ಷಣ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ನಾವು ಮಹಿಳೆಯರಾಗಿ, ರಾಜಕೀಯವಾಗಿ ಏನು ನಡೆಯುತ್ತಿದೆ ಮತ್ತು ಮೊದಲು ಏನು ನಡೆದಿದೆ ಎಂಬುದರ ಸಂದರ್ಭವನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಜೂನ್ 25, 1975ರಂದು ಆಗಿನ ಪ್ರಧಾನಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿ ಮಾರ್ಚ್ 21, 1977ರವರೆಗೆ ನಡೆಯಿತು. ಇದನ್ನು ಪತ್ರಿಕಾ ಸೆನ್ಸಾರ್ಶಿಪ್, ಸಾಮೂಹಿಕ ಬಂಧನಗಳು ಮತ್ತು ಪ್ರಜಾಪ್ರಭುತ್ವ ಸ್ವಾತಂತ್ರ್ಯಗಳ ದಮನದಿಂದ ಗುರುತಿಸಲ್ಪಟ್ಟ ಅವಧಿ ಎಂದು ವ್ಯಾಪಕವಾಗಿ ನೆನಪಿಸಿಕೊಳ್ಳಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

53 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

1 hour ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 hours ago