ದೇಶ- ವಿದೇಶ

ಎಂಪಾಕ್ಸ್‌: ಲಸಿಕೆಗೆ ಅನುಮೋದನೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ: ಇತ್ತೀಚೆಗೆ ಆಫ್ರಿಕಾದದ್ಯಾಂತ ಹರಡಿರುವ ಎಂಪಾಕ್ಸ್‌ ಸೋಂಕು ವಿರುದ್ಧ ಹೋರಾಡಲು ವಿಶ್ವ ಆರೋಗ್ಯ ಸಂಸ್ಥೆಯು ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ರೋಗ ನಿಯಂತ್ರಣಕ್ಕಾಗಿ ಪ್ರಥಮ ಬಾರಿಗೆ ಎಂಪಾಕ್ಸ್‌ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ.

ಆಫ್ರಿಕಾದಲ್ಲಿ ಪ್ರಸ್ತುತ ರೋಗ ಉಲ್ಬಣಗೊಂಡಿದ್ದು, ಈ ರೋಗದ ವಿರುದ್ಧ ಹೋರಾಡಲು ಈ ಲಸಿಕೆ ಒಂದು ಪ್ರಮುಖ ಹೆಜ್ಜೆಯಾಗಿದೆ. ಯುಎನ್‌ ಆರೋಗ್ಯ ಏಜೆನ್ಸಿ ಮುಖ್ಯಸ್ಥರು ಲಸಿಕೆಯನ್ನು ಹೆಚ್ಚು ಅಗ್ಯವಿದ್ದಲ್ಲಿ ಪಡೆಯಲು ಸಂಗ್ರಹಣೆ, ದೇಣಿಗೆಗಳು ಮತ್ತು ಲಸಿಕೆ ವಿತರಣೆಯ ತುರ್ತು ಪ್ರಮಾಣಕ್ಕೆ ವಿಶ್ವ ಸಂಸ್ಥೆ ಕರೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರದ ಅಡಿಯಲ್ಲಿ ಈ ಲಸಿಕೆಯನ್ನು ೧೮ ವರ್ಷದವರಿಗೆ ಹಾಗೂ ಅದಕ್ಕಿಂತ ಮೇಲ್ಪಟ್ಟ ವಯೋಮಾನದವರಿಗೆ ೨ ಡೋಸ್‌ನಂತೆ ನೀಡಬಹುದಾಗಿದೆ. ಲಸಿಕೆಯನ್ನು ೧೮ ವರ್ಷಕ್ಕಿಂತ ಕಡಿಮೆ ಇರುವ ವಯಸ್ಸಿನವರಿಗೆ ನೀಡುವಾಗ ಯಾವುದೇ ಅಪಾಯ ಸಂಭವಿಸದೆ ಇದ್ದರೆ ಅದನ್ನು ಶಿಶುಗಳು, ಮಕ್ಕಳು ಹಾಗೂ ಹದಿಹರೆಯದವರಲ್ಲಿ ಬಳಸಬಹುದು ಎಂದು ಅನುಮೋದನೆಯಲ್ಲಿ ಉಲ್ಲೇಖಿಸಲಾಗಿದೆ.

ಎಂಪ್ಯಾಕ್ಸ್‌ ಲಸಿಕೆಯನ್ನು ಬಳಸಲು ಈಗಾಗಲೇ ವಿಶ್ವಸಂಸ್ಥೆ ಅನುಮೋದನೆ ನೀಡಿದಲ್ಲದೆ, ಲಸಿಕೆಯನ್ನು ಆಫ್ರಿಕಾ ಮತ್ತು ಅದರಾಚೆಗಿನ ದೇಶಗಳು ರೋಗದ ವಿರುದ್ಧ ಹೋರಾಡುವ ದಿಟ್ಟ ಹೆಜ್ಜೆ ಎಂದಿದೆ.

ಲಸಿಕೆಗೆ ಸಂಬಂಧ ಪಟ್ಟಂತೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ನಿರ್ದೇಶಕ ಟೆಡ್ರೋಸ್‌ ಅಧಾನಮ್‌ ಘೆಬ್ರೆಯೆಸಸ್‌ ಮಾತನಾಡಿ, ಪ್ರಸ್ತುತ ಆಫ್ರಿಕಾದಲ್ಲಿ ರೋಗ ಹೆಚ್ಚಾಗುತ್ತಿದೆ. ಹೀಗಾಗಿ ಅದನ್ನು ತಡೆಯಲು ಪೂರ್ವ ಅರ್ಹತೆಯ ಲಸಿಕೆ ತಯಾರಿಸಿರುವುದು ಒಂದು ಪ್ರಮುಖ ಹೆಜ್ಜೆಯಾಗಿದೆ. ಅಲ್ಲದೆ ಭವಿಷ್ಯದಲ್ಲಿ ಈ ಲಸಿಕೆ ರೋಗಗಳು ಬರದಂತೆ ಹೋರಾಟ ಮಾಡುವಲ್ಲಿ ಯಶ್ವಸಿಯಾಗುತ್ತದೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago