ದೇಶ- ವಿದೇಶ

ಎಂಪಾಕ್ಸ್‌: ಲಸಿಕೆಗೆ ಅನುಮೋದನೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ: ಇತ್ತೀಚೆಗೆ ಆಫ್ರಿಕಾದದ್ಯಾಂತ ಹರಡಿರುವ ಎಂಪಾಕ್ಸ್‌ ಸೋಂಕು ವಿರುದ್ಧ ಹೋರಾಡಲು ವಿಶ್ವ ಆರೋಗ್ಯ ಸಂಸ್ಥೆಯು ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ರೋಗ ನಿಯಂತ್ರಣಕ್ಕಾಗಿ ಪ್ರಥಮ ಬಾರಿಗೆ ಎಂಪಾಕ್ಸ್‌ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ.

ಆಫ್ರಿಕಾದಲ್ಲಿ ಪ್ರಸ್ತುತ ರೋಗ ಉಲ್ಬಣಗೊಂಡಿದ್ದು, ಈ ರೋಗದ ವಿರುದ್ಧ ಹೋರಾಡಲು ಈ ಲಸಿಕೆ ಒಂದು ಪ್ರಮುಖ ಹೆಜ್ಜೆಯಾಗಿದೆ. ಯುಎನ್‌ ಆರೋಗ್ಯ ಏಜೆನ್ಸಿ ಮುಖ್ಯಸ್ಥರು ಲಸಿಕೆಯನ್ನು ಹೆಚ್ಚು ಅಗ್ಯವಿದ್ದಲ್ಲಿ ಪಡೆಯಲು ಸಂಗ್ರಹಣೆ, ದೇಣಿಗೆಗಳು ಮತ್ತು ಲಸಿಕೆ ವಿತರಣೆಯ ತುರ್ತು ಪ್ರಮಾಣಕ್ಕೆ ವಿಶ್ವ ಸಂಸ್ಥೆ ಕರೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರದ ಅಡಿಯಲ್ಲಿ ಈ ಲಸಿಕೆಯನ್ನು ೧೮ ವರ್ಷದವರಿಗೆ ಹಾಗೂ ಅದಕ್ಕಿಂತ ಮೇಲ್ಪಟ್ಟ ವಯೋಮಾನದವರಿಗೆ ೨ ಡೋಸ್‌ನಂತೆ ನೀಡಬಹುದಾಗಿದೆ. ಲಸಿಕೆಯನ್ನು ೧೮ ವರ್ಷಕ್ಕಿಂತ ಕಡಿಮೆ ಇರುವ ವಯಸ್ಸಿನವರಿಗೆ ನೀಡುವಾಗ ಯಾವುದೇ ಅಪಾಯ ಸಂಭವಿಸದೆ ಇದ್ದರೆ ಅದನ್ನು ಶಿಶುಗಳು, ಮಕ್ಕಳು ಹಾಗೂ ಹದಿಹರೆಯದವರಲ್ಲಿ ಬಳಸಬಹುದು ಎಂದು ಅನುಮೋದನೆಯಲ್ಲಿ ಉಲ್ಲೇಖಿಸಲಾಗಿದೆ.

ಎಂಪ್ಯಾಕ್ಸ್‌ ಲಸಿಕೆಯನ್ನು ಬಳಸಲು ಈಗಾಗಲೇ ವಿಶ್ವಸಂಸ್ಥೆ ಅನುಮೋದನೆ ನೀಡಿದಲ್ಲದೆ, ಲಸಿಕೆಯನ್ನು ಆಫ್ರಿಕಾ ಮತ್ತು ಅದರಾಚೆಗಿನ ದೇಶಗಳು ರೋಗದ ವಿರುದ್ಧ ಹೋರಾಡುವ ದಿಟ್ಟ ಹೆಜ್ಜೆ ಎಂದಿದೆ.

ಲಸಿಕೆಗೆ ಸಂಬಂಧ ಪಟ್ಟಂತೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ನಿರ್ದೇಶಕ ಟೆಡ್ರೋಸ್‌ ಅಧಾನಮ್‌ ಘೆಬ್ರೆಯೆಸಸ್‌ ಮಾತನಾಡಿ, ಪ್ರಸ್ತುತ ಆಫ್ರಿಕಾದಲ್ಲಿ ರೋಗ ಹೆಚ್ಚಾಗುತ್ತಿದೆ. ಹೀಗಾಗಿ ಅದನ್ನು ತಡೆಯಲು ಪೂರ್ವ ಅರ್ಹತೆಯ ಲಸಿಕೆ ತಯಾರಿಸಿರುವುದು ಒಂದು ಪ್ರಮುಖ ಹೆಜ್ಜೆಯಾಗಿದೆ. ಅಲ್ಲದೆ ಭವಿಷ್ಯದಲ್ಲಿ ಈ ಲಸಿಕೆ ರೋಗಗಳು ಬರದಂತೆ ಹೋರಾಟ ಮಾಡುವಲ್ಲಿ ಯಶ್ವಸಿಯಾಗುತ್ತದೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

6 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

7 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

8 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

9 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

14 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

16 hours ago