ದೇಶ- ವಿದೇಶ

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ.

ಸಂಸತ್‌ ಕಲಾಪದಲ್ಲಿ ನಡೆದ ಕಲಾಪದ ಚರ್ಚೆಯಲ್ಲಿ ಮಾತನಾಡಿದ ಯದುವೀರ್‌ ಒಡೆಯರ್‌ ಅವರು, ಮೈಸೂರು ಸೇರಿದಂತೆ ಭಾರತದ ಪಾರಂಪರಿಕ ನಗರಗಳು ಈಗ ಸಾಕಷ್ಟು ಆತಂಕ ಎದುರಿಸುತ್ತಿವೆ. ಅನಿಯಂತ್ರಿತ, ಅವೈಜ್ಞಾನಿಕ ನಗರೀಕರಣದಿಂದ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.

ಈ ಮೂಲಕ ಪಾರಂಪರಿಕತೆ ಬೆಳೆಸಲು ಸೂಕ್ತವಾಗಿ ಕಾನೂನು ಚೌಕಟ್ಟು, ನೀತಿ ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಖಾಸಗಿ ಪಾಲುದಾರಿಕೆಯಲ್ಲಿ ಪರಿಣಾಮಕಾರಿ ಪಾರಂಪರಿಕ ಸಂರಕ್ಷಣೆ, ಡಿಜಿಟಲ್‌ ಮ್ಯಾಪಿಂಗ್‌, ನಗರ ವಸಾಹತು, ನಾಗರಿಕತೆ ಸಂರಕ್ಷಣೆ ಮಾಡಬೇಕಿದೆ. ನಮ್ಮ ಸಂಸ್ಕೃತಿ, ಸ್ಮರಣೆ, ಭಂಡಾರಗಳನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago