ದೇಶ- ವಿದೇಶ

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ.

ಸಂಸತ್‌ ಕಲಾಪದಲ್ಲಿ ನಡೆದ ಕಲಾಪದ ಚರ್ಚೆಯಲ್ಲಿ ಮಾತನಾಡಿದ ಯದುವೀರ್‌ ಒಡೆಯರ್‌ ಅವರು, ಮೈಸೂರು ಸೇರಿದಂತೆ ಭಾರತದ ಪಾರಂಪರಿಕ ನಗರಗಳು ಈಗ ಸಾಕಷ್ಟು ಆತಂಕ ಎದುರಿಸುತ್ತಿವೆ. ಅನಿಯಂತ್ರಿತ, ಅವೈಜ್ಞಾನಿಕ ನಗರೀಕರಣದಿಂದ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.

ಈ ಮೂಲಕ ಪಾರಂಪರಿಕತೆ ಬೆಳೆಸಲು ಸೂಕ್ತವಾಗಿ ಕಾನೂನು ಚೌಕಟ್ಟು, ನೀತಿ ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಖಾಸಗಿ ಪಾಲುದಾರಿಕೆಯಲ್ಲಿ ಪರಿಣಾಮಕಾರಿ ಪಾರಂಪರಿಕ ಸಂರಕ್ಷಣೆ, ಡಿಜಿಟಲ್‌ ಮ್ಯಾಪಿಂಗ್‌, ನಗರ ವಸಾಹತು, ನಾಗರಿಕತೆ ಸಂರಕ್ಷಣೆ ಮಾಡಬೇಕಿದೆ. ನಮ್ಮ ಸಂಸ್ಕೃತಿ, ಸ್ಮರಣೆ, ಭಂಡಾರಗಳನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago