Mysore
24
moderate rain

Social Media

ಸೋಮವಾರ, 19 ಮೇ 2025
Light
Dark

ಕಾಶ್ಮೀರ: ಬಾರಾಮುಲ್ಲಾ ಗಡಿ ರೇಖೆಯಲ್ಲಿ ಭಾರತೀಯ ಸೇನೆ , ಉಗ್ರರ ಮಧ್ಯೆ ಎನ್ಕೌಂಟರ್

ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ ವಿರೋಧಿ ಕಾರ್ಯಾಚರಣೆ ಭಾಗವಾಗಿ ಉರಿ ಹಾಗೂ ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಚಿನಾರ್‌ ಕೋರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಗಡಿ ರೇಖೆಯಲ್ಲಿ ಉಗ್ರರು ಮನಸ್ಸಿಗೆ ಬಂದಂತೆ ದಾಳಿ ನಡೆಸಿದ್ದಾರೆ. ಇದಕ್ಕೆ ನಮ್ಮ ದೇಶದ ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಹೆಚ್ಚಿನ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

 

 

Tags: