ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ ಪ್ರಭಾವಿತನಾಗಿದ್ದೇನೆ. ಹೀಗಾಗಿ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೇಯ ಜ್ಯೋತಿರ್ಲಿಂಗವಾದ ಶ್ರೀ ಸೋಮನಾಥನ ದರ್ಶನಕ್ಕೆ ಹೋಗುತ್ತೇನೆ. ಭಕ್ತಿಯ ಸಂಕೇತವಾಗಿ ಸಂಕಲ್ಪ ಪುಷ್ಪವನ್ನು ಅರ್ಪಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಿಗಾಗಿ ಪ್ರಾರ್ಥಿಸುತ್ತೇನೆ. ದೇಶವಾಸಿಗಳಲ್ಲಿ ಈ ಏಕತೆಯು ನಿರಂತರವಾಗಿ ಇರಲಿ ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.
ಈ ಮಹಾಕುಂಭಮೇಳದಲ್ಲಿ ಸಮಾಜದ ಪ್ರತಿಯೊಂದು ಸ್ಥರದ ಮತ್ತು ಪ್ರತಿಯೊಂದಯ ಕ್ಷೇತ್ರದ ಜನರು ಒಟ್ಟುಗೂಡಿದರು. ಏಕ ಭಾರತ ಶ್ರೇಷ್ಠ ಭಾರತದ ಈ ಅವಿಸ್ಮರಣೀಯ ದೃಶ್ಯವು ಕೋಟ್ಯಾಂತರ ದೇಶವಾಸಿಗಳಲ್ಲಿ ಆತ್ಮವಿಶ್ವಾಸದ ಮಹಾ ಹಬ್ಬವಾಯಿತು ಎಂದು ಪ್ರಧಾನಿ ಮೋದಿ ಕೊಂಡಾಡಿದ್ದಾರೆ.
ಇನ್ನು ಮಹಾಕುಂಭಮೇಳ ಮುಗಿದ ನಂತರ ನನ್ನ ಮನಸ್ಸಿಗೆ ಬಂದ ಆಲೋಚನೆಗಳನ್ನು ಬರೆಯಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…