ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ ಪ್ರಭಾವಿತನಾಗಿದ್ದೇನೆ. ಹೀಗಾಗಿ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೇಯ ಜ್ಯೋತಿರ್ಲಿಂಗವಾದ ಶ್ರೀ ಸೋಮನಾಥನ ದರ್ಶನಕ್ಕೆ ಹೋಗುತ್ತೇನೆ. ಭಕ್ತಿಯ ಸಂಕೇತವಾಗಿ ಸಂಕಲ್ಪ ಪುಷ್ಪವನ್ನು ಅರ್ಪಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಿಗಾಗಿ ಪ್ರಾರ್ಥಿಸುತ್ತೇನೆ. ದೇಶವಾಸಿಗಳಲ್ಲಿ ಈ ಏಕತೆಯು ನಿರಂತರವಾಗಿ ಇರಲಿ ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.
ಈ ಮಹಾಕುಂಭಮೇಳದಲ್ಲಿ ಸಮಾಜದ ಪ್ರತಿಯೊಂದು ಸ್ಥರದ ಮತ್ತು ಪ್ರತಿಯೊಂದಯ ಕ್ಷೇತ್ರದ ಜನರು ಒಟ್ಟುಗೂಡಿದರು. ಏಕ ಭಾರತ ಶ್ರೇಷ್ಠ ಭಾರತದ ಈ ಅವಿಸ್ಮರಣೀಯ ದೃಶ್ಯವು ಕೋಟ್ಯಾಂತರ ದೇಶವಾಸಿಗಳಲ್ಲಿ ಆತ್ಮವಿಶ್ವಾಸದ ಮಹಾ ಹಬ್ಬವಾಯಿತು ಎಂದು ಪ್ರಧಾನಿ ಮೋದಿ ಕೊಂಡಾಡಿದ್ದಾರೆ.
ಇನ್ನು ಮಹಾಕುಂಭಮೇಳ ಮುಗಿದ ನಂತರ ನನ್ನ ಮನಸ್ಸಿಗೆ ಬಂದ ಆಲೋಚನೆಗಳನ್ನು ಬರೆಯಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…