ದೇಶ- ವಿದೇಶ

5079ಕ್ಕೆ ಜಗತ್ತು ಅಂತ್ಯಗೊಳ್ಳುತ್ತೆ: ಬಾಬಾ ವಂಗಾ ಭಯಾನಕ ಭವಿಷ್ಯ

ಬಲ್ಗೇರಿಯಾ: ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯವಾಗಿರುವ ಬಾಬಾ ವಂಗಾ ಅವರು ಭಯಾನಕ ಭವಿಷ್ಯವೊಂದನ್ನು ಹೇಳಿದ್ದಾರೆ.

ಬಲ್ಗೇರಿಯಾದ ಕುರುಡು ಆಧ್ಯಾತ್ಮಿಕವಾದಿ ಬಾಬಾ ವಂಗಾ ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯರಾಗಿದ್ದಾರೆ. ಮುಂಬರುವ ದಶಕಗಳು ಹಾಗೂ ಶತಮಾನಗಳಲ್ಲಿ ಏನಾಗುತ್ತದೆ ಎಂಬುದರ ಬಗ್ಗೆ ಇನ್ನೂ ಕೆಲವು ಭವಿಷ್ಯವಾಣಿಗಳನ್ನು ಬಹಿರಂಗಪಡಿಸಿದ್ದಾರೆ. ನಿಖರವಾದ ಮುನ್ಸೂಚನೆಗಳನ್ನು ನೀಡುವಲ್ಲಿ ಪ್ರಸಿದ್ಧರಾಗಿರುವ ಬಾಬಾ ವಂಗಾ ಅವರ ಅನೇಕ ಭವಿಷ್ಯವಾಣಿಗಳು ನಿಜವಾಗಿವೆ.

ಅವುಗಳಲ್ಲಿ ಒಂದು ವಿಶ್ವ ವ್ಯಾಪಾರ ಕೇಂದ್ರದ ಮೇಲಿನ ದಾಳಿ. ೨೦೨೩ರಲ್ಲಿ ಬಾಬಾ ವಂಗಾ ಹೇಳಿದ ಕೆಲವು ಭವಿಷ್ಯವಾಣಿಗಳು ನಿಜವಾಗಿದ್ದವು. ಈಗ ಅವರು ೨೦೨೫ ಮತ್ತು ಮುಂಬರುವ ವರ್ಷಗಳನ್ನು ಭವಿಷ್ಯ ನುಡಿದಿದ್ದಾರೆ. ಈ ಮುಂದಿನ ವರ್ಷದ ಭವಿಷ್ಯವನ್ನು ಓದಿದರೆ ತೀವ್ರ ಭಯವಾಗುವುದು ಪಕ್ಕಾ ಎನ್ನಲಾಗುತ್ತಿದೆ.

೨೦೨೫ರಲ್ಲಿ ಯುರೋಪ್‌ನಲ್ಲಿನ ಪ್ರಮುಖ ಸಂಘರ್ಷ ಉಂಟಾಗುತ್ತದೆ. ಇದು ಖಂಡದ ಜನಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಗೆ ಕಾರಣವಾಗುತ್ತದೆ. ೨೦೨೮ರಲ್ಲಿ ಹೊಸ ಶಕ್ತಿಯ ಮೂಲಗಳನ್ನು ಹುಡುಕುವ ಪ್ರಯತ್ನದಲ್ಲಿ ಮಾನವ ಶುಕ್ರನನ್ನು ತಲುಪುತ್ತದೆ. ೨೦೩೩ರ ಧ್ರುವೀಯ ಮಂಜುಗಡ್ಡೆಯ ಕರಗುವಿಕೆಯು ಸಮುದ್ರ ಮಟ್ಟದಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗುತ್ತದೆ.

೨೦೭೬ಕ್ಕೆ ಕಮ್ಯುನಿಸಂ ಜಾಗತಿಕವಾಗಿ ಮರಳಲಿದೆ. ೨೧೩೦ಕ್ಕೆ ಭೂಮ್ಯತೀತ ನಾಗರಿಕತೆಗಳೊಂದಿಗೆ ಸಂಪರ್ಕ. ೨೧೭೦ ಜಾಗತಿಕ ಬರ ಬರಲಿದೆ. ಒಟ್ಟಾರೆ ೫೦೭೯ಕ್ಕೆ ಪೂರ್ಣ ಪ್ರಪಂಚವೇ ಅಂತ್ಯವಾಗುತ್ತದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

11 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

11 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

11 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

11 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

12 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

12 hours ago