engine fail in delhi to goa flight
ಮುಂಬೈ : ದಿಲ್ಲಿಯಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ ವಿಮಾನವು ಎಂಜಿನ್ ವೈಫಲ್ಯದಿಂದಾಗಿ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏರ್ಬಸ್ ಎ೩೨೦ ನಿಯೋ ವಿಮಾನ ಬುಧವಾರ ರಾತ್ರಿ ೯.೫೨ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದಾಗಿ ವಿಮಾನವನ್ನು ಮುಂಬೈನಲ್ಲಿ ತುರ್ತು ಭೂಸ್ಪರ್ಶಗೊಳಿಸಲಾಯಿತು ಬಳಿಕ ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿ ಘೋಷಿಸಲಾಯಿತು ಎಂದು ಇಂಡಿಗೋ ಸಂಸ್ಥೆ ತನ್ನ ಹೇಳಿಕೆಯಲ್ಲಿ ಹೇಳಿದೆ.
ಜುಲೈ ೧೬ರಂದು ದಿಲ್ಲಿಯಿಂದ ಗೋವಾದ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಾಟ ನಡೆಸುತ್ತಿದ್ದ ೬ಇ ೬೨೭೧ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಹೀಗಾಗಿ, ವಿಮಾನವನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಲಾಯಿತು. ವಿಮಾನವು ಅಗತ್ಯ ತಪಾಸಣೆ ಮತ್ತು ನಿರ್ವಹಣೆಗೆ ಒಳಪಡಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಯಿತು ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. ಆದರೆ ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆ ಬಗ್ಗೆ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿಲ್ಲ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…