ದೇಶ- ವಿದೇಶ

ಇಒಎಸ್‌-08 ಭೂವೀಕ್ಷಣಾ ಕಿರು ಉಪಗ್ರಹ ಉಡ್ಡಯನ ಯಶಸ್ವಿ!

ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್‌-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್‌ ಇದಾಗಿರುವುದು ವಿಶೇಷ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಿಗ್ಗೆ 9.17ಕ್ಕೆ ಸರಿಯಾಗಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ ಕೇಂದ್ರದಿಂದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ ನಿರ್ಮಿಸಿರುವ ಎಸ್‌ಎಲ್‌ಎಲ್‌ವಿ -ಡಿ3 ಕಿರು ಉಪಗ್ರಹ ಹೊತ್ತ ರಾಕೇಟ್‌ನ್ನು ಯಶಸ್ವಿಯಾಗಿ ಉಡ್ಡಯನ ಮಾಡಲಾಯಿತು.

ಈ ಇಒಎಸ್‌-08 ಮೈಕ್ರೋಸ್ಯಾಟಲೈಟ್‌ ವಿನ್ಯಾಸ, ಅಭಿವೃದ್ಧಿ ಹಾಗೂ ಉಪಗ್ರಹಗಳ ಕಾರ್ಯಾಚರಣೆಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ.

175.5 ಕೆಜಿ ತೂಕದ ಕಿರು ಪುಗ್ರಹ ಮೂರು ಪೆಲೋಡ್‌ಗಳನ್ನು ಒಳಗೊಂಡಿದೆ. ಇಒಐಆರ್‌, ಜಿಎನ್‌ಎಸ್‌ಎಸ್‌-ಆರ್‌ ಮತ್ತು ಎಸ್‌ಐಸಿ ಯುವಿ ಡೊಸೀಮೀಟರ್‌ನ್ನು ಹೊಂದಿದೆ.

SSLV-D3/EOS-08 ಮಿಷನ್: ಎಸ್‌ಎಸ್‌ಎಲ್‌ವಿಯ ಮೂರನೇ ಅಭಿವೃದ್ಧಿ ಹಾರಾಟ ಯಶಸ್ವಿಯಾಗಿದೆ. SSLV-D3 EOS-08 ಅನ್ನು ನಿಖರವಾಗಿ ಕಕ್ಷೆಗೆ ಸೇರಿಸಿತು.

ಇದು ISRO/DOS ನ SSLV ಡೆವಲಪ್‌ಮೆಂಟ್ ಪ್ರಾಜೆಕ್ಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದನ್ನು ಸೂಚಿಸುತ್ತದೆ.

ತಂತ್ರಜ್ಞಾನ ವರ್ಗಾವಣೆಯೊಂದಿಗೆ, ಭಾರತೀಯ ಉದ್ಯಮ ಮತ್ತು ಎನ್‌ಎಸ್‌ಐಎಲ್‌ ಈಗ ವಾಣಿಜ್ಯ ಕಾರ್ಯಾಚರಣೆಗಳಿಗಾಗಿ SSLV ಅನ್ನು ಉತ್ಪಾದಿಸುತ್ತದೆ.

https://x.com/DrJitendraSingh/status/1824296320309530671

https://x.com/isro/status/1824295769907818833

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

24 mins ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

1 hour ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

1 hour ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

3 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

3 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

3 hours ago