ದೇಶ- ವಿದೇಶ

ಇಒಎಸ್‌-08 ಭೂವೀಕ್ಷಣಾ ಕಿರು ಉಪಗ್ರಹ ಉಡ್ಡಯನ ಯಶಸ್ವಿ!

ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್‌-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್‌ ಇದಾಗಿರುವುದು ವಿಶೇಷ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಿಗ್ಗೆ 9.17ಕ್ಕೆ ಸರಿಯಾಗಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ ಕೇಂದ್ರದಿಂದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ ನಿರ್ಮಿಸಿರುವ ಎಸ್‌ಎಲ್‌ಎಲ್‌ವಿ -ಡಿ3 ಕಿರು ಉಪಗ್ರಹ ಹೊತ್ತ ರಾಕೇಟ್‌ನ್ನು ಯಶಸ್ವಿಯಾಗಿ ಉಡ್ಡಯನ ಮಾಡಲಾಯಿತು.

ಈ ಇಒಎಸ್‌-08 ಮೈಕ್ರೋಸ್ಯಾಟಲೈಟ್‌ ವಿನ್ಯಾಸ, ಅಭಿವೃದ್ಧಿ ಹಾಗೂ ಉಪಗ್ರಹಗಳ ಕಾರ್ಯಾಚರಣೆಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ.

175.5 ಕೆಜಿ ತೂಕದ ಕಿರು ಪುಗ್ರಹ ಮೂರು ಪೆಲೋಡ್‌ಗಳನ್ನು ಒಳಗೊಂಡಿದೆ. ಇಒಐಆರ್‌, ಜಿಎನ್‌ಎಸ್‌ಎಸ್‌-ಆರ್‌ ಮತ್ತು ಎಸ್‌ಐಸಿ ಯುವಿ ಡೊಸೀಮೀಟರ್‌ನ್ನು ಹೊಂದಿದೆ.

SSLV-D3/EOS-08 ಮಿಷನ್: ಎಸ್‌ಎಸ್‌ಎಲ್‌ವಿಯ ಮೂರನೇ ಅಭಿವೃದ್ಧಿ ಹಾರಾಟ ಯಶಸ್ವಿಯಾಗಿದೆ. SSLV-D3 EOS-08 ಅನ್ನು ನಿಖರವಾಗಿ ಕಕ್ಷೆಗೆ ಸೇರಿಸಿತು.

ಇದು ISRO/DOS ನ SSLV ಡೆವಲಪ್‌ಮೆಂಟ್ ಪ್ರಾಜೆಕ್ಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದನ್ನು ಸೂಚಿಸುತ್ತದೆ.

ತಂತ್ರಜ್ಞಾನ ವರ್ಗಾವಣೆಯೊಂದಿಗೆ, ಭಾರತೀಯ ಉದ್ಯಮ ಮತ್ತು ಎನ್‌ಎಸ್‌ಐಎಲ್‌ ಈಗ ವಾಣಿಜ್ಯ ಕಾರ್ಯಾಚರಣೆಗಳಿಗಾಗಿ SSLV ಅನ್ನು ಉತ್ಪಾದಿಸುತ್ತದೆ.

https://x.com/DrJitendraSingh/status/1824296320309530671

https://x.com/isro/status/1824295769907818833

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago