ದೇಶ- ವಿದೇಶ

ಇಒಎಸ್‌-08 ಭೂವೀಕ್ಷಣಾ ಕಿರು ಉಪಗ್ರಹ ಉಡ್ಡಯನ ಯಶಸ್ವಿ!

ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್‌-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್‌ ಇದಾಗಿರುವುದು ವಿಶೇಷ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಿಗ್ಗೆ 9.17ಕ್ಕೆ ಸರಿಯಾಗಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ ಕೇಂದ್ರದಿಂದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ ನಿರ್ಮಿಸಿರುವ ಎಸ್‌ಎಲ್‌ಎಲ್‌ವಿ -ಡಿ3 ಕಿರು ಉಪಗ್ರಹ ಹೊತ್ತ ರಾಕೇಟ್‌ನ್ನು ಯಶಸ್ವಿಯಾಗಿ ಉಡ್ಡಯನ ಮಾಡಲಾಯಿತು.

ಈ ಇಒಎಸ್‌-08 ಮೈಕ್ರೋಸ್ಯಾಟಲೈಟ್‌ ವಿನ್ಯಾಸ, ಅಭಿವೃದ್ಧಿ ಹಾಗೂ ಉಪಗ್ರಹಗಳ ಕಾರ್ಯಾಚರಣೆಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ.

175.5 ಕೆಜಿ ತೂಕದ ಕಿರು ಪುಗ್ರಹ ಮೂರು ಪೆಲೋಡ್‌ಗಳನ್ನು ಒಳಗೊಂಡಿದೆ. ಇಒಐಆರ್‌, ಜಿಎನ್‌ಎಸ್‌ಎಸ್‌-ಆರ್‌ ಮತ್ತು ಎಸ್‌ಐಸಿ ಯುವಿ ಡೊಸೀಮೀಟರ್‌ನ್ನು ಹೊಂದಿದೆ.

SSLV-D3/EOS-08 ಮಿಷನ್: ಎಸ್‌ಎಸ್‌ಎಲ್‌ವಿಯ ಮೂರನೇ ಅಭಿವೃದ್ಧಿ ಹಾರಾಟ ಯಶಸ್ವಿಯಾಗಿದೆ. SSLV-D3 EOS-08 ಅನ್ನು ನಿಖರವಾಗಿ ಕಕ್ಷೆಗೆ ಸೇರಿಸಿತು.

ಇದು ISRO/DOS ನ SSLV ಡೆವಲಪ್‌ಮೆಂಟ್ ಪ್ರಾಜೆಕ್ಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದನ್ನು ಸೂಚಿಸುತ್ತದೆ.

ತಂತ್ರಜ್ಞಾನ ವರ್ಗಾವಣೆಯೊಂದಿಗೆ, ಭಾರತೀಯ ಉದ್ಯಮ ಮತ್ತು ಎನ್‌ಎಸ್‌ಐಎಲ್‌ ಈಗ ವಾಣಿಜ್ಯ ಕಾರ್ಯಾಚರಣೆಗಳಿಗಾಗಿ SSLV ಅನ್ನು ಉತ್ಪಾದಿಸುತ್ತದೆ.

https://x.com/DrJitendraSingh/status/1824296320309530671

https://x.com/isro/status/1824295769907818833

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

6 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

14 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago