ನವದೆಹಲಿ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಬೆಂಗಳೂರಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರ ಮಂಜೂರು ಮಾಡುವಂತೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಮುನಿಯಪ್ಪ ಅವರು ಬೇಡಿಕೆ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಉದ್ಯಮ ಪೋರ್ಟಲ್ನಲ್ಲಿ 45,000 MSME ಘಟಕಗಳು ನೋದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗವಕಾಶಗಳನ್ನು ಒದಗಿಸುತ್ತಿವೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದರು.
ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರ ಕಡಿಮೆ ಮಾಡಬಹುದಾಗಿದೆ ಎಂದು ಚರ್ಚಿಸಿದ್ದಾರೆ.
ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರವನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ವಿನಂತಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…