ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು
ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ ಹೆಚ್ಚಾಗಿ ತರಕಾರಿಯಿಂದ ದಿನಸಿಯವರೆಗೆ ನಮ್ಮ ದಿನನಿತ್ಯದ ಪ್ರತಿಯೊಂದು ವಸ್ತುವೂ ದುಬಾರಿಯಾಗುವುದು ಸತ್ಯವಾದರೂ ಹಳೆಯ ವಿಷಯ. ಆದರೆ ಇದು ಕೇವಲ ಆರಂಭವಷ್ಟೇ.
ಪೆಟ್ರೋಲಿಯಂನ ಉಪ ಉತ್ಪನ್ನಗಳಾದ ಪ್ಲಾಸ್ಟಿಕ್ ಮತ್ತು ರಾಸಾಯನಿಕ ಗೊಬ್ಬರಗಳ ಬೆಲೆ ಈಗ ಏರತೊಡಗಿದೆ. ಗೊಬ್ಬರದ ಬೆಲೆ ಹೆಚ್ಚಾದರೆ ರೈತರ ಮೇಲಿನ ಹೊರೆ ಹೆಚ್ಚಾಗಿ ಆಹಾರ ಧಾನ್ಯಗಳ ಬೆಲೆ ಮತ್ತಷ್ಟು ಏರುತ್ತದೆ.
ಆದರೆ ಇಂದಿನ globalized ಯುಗದಲ್ಲಿ ಜಾಗತಿಕ ಮಾರುಕಟ್ಟೆಯ ಕೊಂಡಿ ಬಹಳ ಸಂಕೀರ್ಣವಾದದ್ದು. ಅಮೆರಿಕ ಇರಾನಿನ ಮೇಲೆ ಬಾಂಬ್ ಹಾಕಿದರೆ ಸಕ್ಕರೆ ಬೆಲೆ ಮೇಲೇರುವುದು ಅಚ್ಚರಿ ಎನ್ನಿಸಬಹುದು. ಆದರೆ, ಅಂತಹ ಲಕ್ಷಣಗಳು ಈಗಾಗಲೇ ಕಾಣುತ್ತಿವೆ. ವಿಶ್ವದ ಅತಿ ದೊಡ್ಡ ಸಕ್ಕರೆ ಉತ್ಪಾದಕ ದೇಶ ಬ್ರೆಜಿಲ್, ತೈಲ ಬೆಲೆ ಏರುತ್ತಿರುವುದರಿಂದ, ತನ್ನ ಕಬ್ಬಿನ ಬೆಳೆ ಕಠಾವಿಗೆ ಬಂದಾಗ ಅದನ್ನು ಸಕ್ಕರೆಯ ಬದಲು ಎಥೆನಾಲ್ ತಯಾರಿಸಲು ಮುಂದಾಗುತ್ತಿದೆಯಂತೆ. ಇದರಿಂದ ಮಾರುಕಟ್ಟೆಯಲ್ಲಿ ಸಕ್ಕರೆಯ ಕೊರತೆ ಉಂಟಾಗಿ ಬೆಲೆ ಏರುವ ಎಲ್ಲಾ ಸಾಧ್ಯತೆಗಳೂ ಇವೆ.
ಹತ್ತು ಸಾವಿರ ಕಿಲೋಮೀಟರ್ ದೂರದ ದೇಶವೊಂದು 3000 ಕಿಮೀ ದೂರದ ಇನ್ನೊಂದು ದೇಶದ ಮೇಲೆ ದಾಳಿ ಮಾಡಿದರೆ 15000 ಕಿಮೀ ದೂರದ ದೇಶದ ಕಾರಣದಿಂದಾಗಿ ಪರಿಣಾಮ ಬೀರುವುದು ಹತ್ತು ಹೆಜ್ಜೆಯೂ ದೂರವಿಲ್ಲದ ನಮ್ಮ ಅಡುಗೆ ಮನೆಯ ಮೇಲೆಯೇ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…