ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು
ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ ಹೆಚ್ಚಾಗಿ ತರಕಾರಿಯಿಂದ ದಿನಸಿಯವರೆಗೆ ನಮ್ಮ ದಿನನಿತ್ಯದ ಪ್ರತಿಯೊಂದು ವಸ್ತುವೂ ದುಬಾರಿಯಾಗುವುದು ಸತ್ಯವಾದರೂ ಹಳೆಯ ವಿಷಯ. ಆದರೆ ಇದು ಕೇವಲ ಆರಂಭವಷ್ಟೇ.
ಪೆಟ್ರೋಲಿಯಂನ ಉಪ ಉತ್ಪನ್ನಗಳಾದ ಪ್ಲಾಸ್ಟಿಕ್ ಮತ್ತು ರಾಸಾಯನಿಕ ಗೊಬ್ಬರಗಳ ಬೆಲೆ ಈಗ ಏರತೊಡಗಿದೆ. ಗೊಬ್ಬರದ ಬೆಲೆ ಹೆಚ್ಚಾದರೆ ರೈತರ ಮೇಲಿನ ಹೊರೆ ಹೆಚ್ಚಾಗಿ ಆಹಾರ ಧಾನ್ಯಗಳ ಬೆಲೆ ಮತ್ತಷ್ಟು ಏರುತ್ತದೆ.
ಆದರೆ ಇಂದಿನ globalized ಯುಗದಲ್ಲಿ ಜಾಗತಿಕ ಮಾರುಕಟ್ಟೆಯ ಕೊಂಡಿ ಬಹಳ ಸಂಕೀರ್ಣವಾದದ್ದು. ಅಮೆರಿಕ ಇರಾನಿನ ಮೇಲೆ ಬಾಂಬ್ ಹಾಕಿದರೆ ಸಕ್ಕರೆ ಬೆಲೆ ಮೇಲೇರುವುದು ಅಚ್ಚರಿ ಎನ್ನಿಸಬಹುದು. ಆದರೆ, ಅಂತಹ ಲಕ್ಷಣಗಳು ಈಗಾಗಲೇ ಕಾಣುತ್ತಿವೆ. ವಿಶ್ವದ ಅತಿ ದೊಡ್ಡ ಸಕ್ಕರೆ ಉತ್ಪಾದಕ ದೇಶ ಬ್ರೆಜಿಲ್, ತೈಲ ಬೆಲೆ ಏರುತ್ತಿರುವುದರಿಂದ, ತನ್ನ ಕಬ್ಬಿನ ಬೆಳೆ ಕಠಾವಿಗೆ ಬಂದಾಗ ಅದನ್ನು ಸಕ್ಕರೆಯ ಬದಲು ಎಥೆನಾಲ್ ತಯಾರಿಸಲು ಮುಂದಾಗುತ್ತಿದೆಯಂತೆ. ಇದರಿಂದ ಮಾರುಕಟ್ಟೆಯಲ್ಲಿ ಸಕ್ಕರೆಯ ಕೊರತೆ ಉಂಟಾಗಿ ಬೆಲೆ ಏರುವ ಎಲ್ಲಾ ಸಾಧ್ಯತೆಗಳೂ ಇವೆ.
ಹತ್ತು ಸಾವಿರ ಕಿಲೋಮೀಟರ್ ದೂರದ ದೇಶವೊಂದು 3000 ಕಿಮೀ ದೂರದ ಇನ್ನೊಂದು ದೇಶದ ಮೇಲೆ ದಾಳಿ ಮಾಡಿದರೆ 15000 ಕಿಮೀ ದೂರದ ದೇಶದ ಕಾರಣದಿಂದಾಗಿ ಪರಿಣಾಮ ಬೀರುವುದು ಹತ್ತು ಹೆಜ್ಜೆಯೂ ದೂರವಿಲ್ಲದ ನಮ್ಮ ಅಡುಗೆ ಮನೆಯ ಮೇಲೆಯೇ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…