ದೇಶ- ವಿದೇಶ

ಎಲ್ಲರಿಗೂ ಸಿಎಂ ಆಗುವ ಅವಕಾಶವಿದೆ: ಸಚಿವ ಎಂ.ಸಿ. ಸುಧಾಕರ್‌

ನವದೆಹಲಿ:‌ ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರಿಗೂ ಸಿಎಂ ಆಗುವ ಅವಕಾಶವಿದೆ. ಆದರೆ, ಸಿಎಂ ಬಗ್ಗೆ ಹೈಕಮಾಂಡ್‌ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್‌ ಹೇಳಿದ್ದಾರೆ.

ಇಂದು (ಫೆ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್‌ ಸಿಎಂ ಅಗಬೇಕೆಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಆದರೆ ಯಾವಾಗ ಆಗಬೇಕು ಎಂದು ತಿಳಿಸಿಲ್ಲ. ಹೋದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನ ಗೆದ್ದ ನಂತರ ಸಿದ್ದರಾಮಯ್ಯ ಜೊತೆ ಡಿಕೆ ಶಿವಕುಮಾರ್‌ ಕೂಡ ಸಿಎಂ ರೇಸ್‌ನಲ್ಲಿ ಇದ್ದರು. ಆದರೆ, ಸಿಎಂ ಬಗ್ಗೆ ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇವರ ಹೇಳಿಕೆ ಬಗ್ಗೆ ವಿಶ್ಲೇಷಣೆ ಆಗತ್ಯವಿಲ್ಲ ಎಂದು ಹೇಳಿದರು.

ಸಚಿವರು, ಹೈಕಮಾಂಡ್‌ ನಾಯಕರನ್ನ ಭೇಟಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೆಲವು ಸಚಿವರು ವೈಯುಕ್ತಿಕ ಕಾರಣಕ್ಕೆ ಬರಬಹುದು. ಇನ್ನು ಕೆಲವರು ರಾಜ್ಯದ ಅಭಿವೃದ್ದಿಗೆ ಸಂಬಂಧಿಸಿದಂತೆ ಅನುದಾನಗಳ ಕುರಿತು ಚರ್ಚಿಸಲು ಬರಬಹುದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

11 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

11 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

11 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

11 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

11 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago