ಮಧ್ಯಪ್ರದೇಶ: ನಿನ್ನೆ (ಮೇ.7) ದೇಶಾದ್ಯಂತ ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಒಟ್ಟು 92ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇನ್ನು ಮಧ್ಯಪ್ರದೇಶದಲ್ಲಿ ಮತದಾನ ನಡೆದ ಬಳಿಕ ಮತಗಟ್ಟೆಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಗೋಲಾ ಗ್ರಾಮದಿಂದ ಮತಯಂತ್ರ ಸಾಗಿಸುತ್ತಿದ್ದ ವಾಹನಕ್ಕೆ ಮಂಗಳವಾರ ತಡರಾತ್ರಿ 11 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ಹೇಳಿದ್ದಾರೆ.
ಬೂತ್ ಸಂಖ್ಯೆ 275, 276, 277, 278, 279, 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗೆ ಹಾನಿಯಾಗಿದೆ. ಎರಡು ಇವಿಎಂ ಗಳು ಸುರಕ್ಷಿತವಾಗಿದೆ. ಹಾನಿಯಾಗಿರುವ ಇವಿಎಂಗಳ ಬ್ಯಾಲೆಟ್ ಯೂನಿಟ್ಗೆ ಹೆಚ್ಚಿನ ಹಾನಿಯಾಗಿದೆ. ಹಾಗೂ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಶೇ.72.65 ರಷ್ಟು ಮತದಾನವಾಗಿದೆ. ಹಾನಿಗೊಳಗಾದ ಮತೆಗಟ್ಟೆಗಳ ಮರು ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…