ಮಧ್ಯಪ್ರದೇಶ: ನಿನ್ನೆ (ಮೇ.7) ದೇಶಾದ್ಯಂತ ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಒಟ್ಟು 92ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇನ್ನು ಮಧ್ಯಪ್ರದೇಶದಲ್ಲಿ ಮತದಾನ ನಡೆದ ಬಳಿಕ ಮತಗಟ್ಟೆಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಗೋಲಾ ಗ್ರಾಮದಿಂದ ಮತಯಂತ್ರ ಸಾಗಿಸುತ್ತಿದ್ದ ವಾಹನಕ್ಕೆ ಮಂಗಳವಾರ ತಡರಾತ್ರಿ 11 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ಹೇಳಿದ್ದಾರೆ.
ಬೂತ್ ಸಂಖ್ಯೆ 275, 276, 277, 278, 279, 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗೆ ಹಾನಿಯಾಗಿದೆ. ಎರಡು ಇವಿಎಂ ಗಳು ಸುರಕ್ಷಿತವಾಗಿದೆ. ಹಾನಿಯಾಗಿರುವ ಇವಿಎಂಗಳ ಬ್ಯಾಲೆಟ್ ಯೂನಿಟ್ಗೆ ಹೆಚ್ಚಿನ ಹಾನಿಯಾಗಿದೆ. ಹಾಗೂ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಶೇ.72.65 ರಷ್ಟು ಮತದಾನವಾಗಿದೆ. ಹಾನಿಗೊಳಗಾದ ಮತೆಗಟ್ಟೆಗಳ ಮರು ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…