ಪಶ್ಚಿಮ ಬಂಗಾಳ: ಇಂದು ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆಯುತ್ತಿದೆ. ದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಕೊನೆಯ ಹಂತದ ಚುನಾವಣೆಯಲ್ಲಿ ಪ್ರಧಾನಿ ಮೋದಿ, ನಟಿ ಕಂಗನಾ ರಣಾವತ್ ಸೇರಿದಂತೆ 904 ಅಭ್ಯರ್ಥಿಗಳಿಗೆ ಇಂದಿನ ಮತದಾನದ ಮೂಲಕ ಭವಿಷ್ಯ ರೂಪಿತವಾಗಲಿದೆ.
ಇತ್ತ ಮತದಾನ ಮಾಡುವ ವೇಳೆ ಪಶ್ಚಿಮ ಬಂಗಾಳದಲ್ಲಿ ಗಲಾಟೆ ನಡೆದಿದ್ದು, ಇವಿಎಂ, ವಿವಿಪ್ಯಾಟ್ಗಳನ್ನು ಚರಂಡಿಗೆ ಬಿಸಾಕಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 6.40 ಸಮಯದಲ್ಲಿ ಬೇನಿಮಾಧವಪುರ ಎಫ್ಪಿ ಶಾಲೆಯ ಬಳಿ ಸೆಕ್ಟರ್ ಆಫೀಸರ್ನ ಮೀಸಲು ಇವಿಎಂ ಮತ್ತು ಪೇಪರ್ಗಳನ್ನು ಸ್ಥಳೀಯರು ದಾಳಿ ನಡೆಸಿ ಲೂಟಿ ಮಾಡಿದ್ದಾರೆ. ಮತ್ತು ಅದರಲ್ಲಿ ಎರಡು ವಿವಿ ಪ್ಯಾಟ್ಗಳನ್ನು ಚರಂಡಿಗೆ ಬಿಸಾಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮತ್ತು ಸೆಕ್ಟರ್ನ ಎಲ್ಲಾ 6 ಬೂತ್ಗಳಿಗೂ ಹೊಸ ಇವಿಎಂ ಹಾಗೂ ವಿವಿ ಪ್ಯಾಟ್ಗಳನ್ನು ಒದಗಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…