ದೇಶ- ವಿದೇಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಲೈಂಗಿಕ ಕಿರುಕುಳ ಪ್ರಕರಣ : ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್‌

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಕವಾಗಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು. ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮತ್ತು ಪೊಲೀಸ್ ಐಜಿ ಅವರ ನಿಷ್ಕ್ರಿಯತೆಯ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆಗಳು ಪ್ರಧಾನಿ ಶೇಖ್ ಹಸೀನಾ ಅವರ ಆದೇಶ ಮತ್ತು ಅವರ ಅರಿವುನಲ್ಲೇ ನಡೆದಿದೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದೀಗ ತಿಂಗಳುಗಳ ಕಾಲ ನಡೆದ ವಿಚಾರಣೆಯಲ್ಲಿ ಉತ್ಪಾದಿಸಲಾದ ಸಾಕ್ಷ್ಯಗಳು, ಭದ್ರತಾ ಸಿಬ್ಬಂದಿಯ ಹೇಳಿಕೆಗಳು ಮತ್ತು ತನಿಖಾ ವರದಿಗಳ ಆಧಾರದಲ್ಲಿ ನ್ಯಾಯಾಲಯವು ಹಸೀನಾ ಅವರ ಪಾತ್ರವನ್ನು ಉಲ್ಲೇಖಿಸಿದೆ. ಪ್ರತಿಭಟನೆಗಳನ್ನು ಕುಂಠಿತಗೊಳಿಸುವ ಹೆಸರಿನಲ್ಲಿ ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗಕ್ಕೆ ಮುಂದಾಗಿದ್ದವು ಎಂಬ ವಿಚಾರವನ್ನು ನ್ಯಾಯಾಲಯ ವಿಶೇಷವಾಗಿ ಉಲ್ಲೇಖಿಸಿದೆ.

ಶೇಖ್ ಹಸೀನಾ ಮಾತ್ರವಲ್ಲದೇ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago