ದೇಶ- ವಿದೇಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಲೈಂಗಿಕ ಕಿರುಕುಳ ಪ್ರಕರಣ : ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್‌

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಕವಾಗಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು. ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮತ್ತು ಪೊಲೀಸ್ ಐಜಿ ಅವರ ನಿಷ್ಕ್ರಿಯತೆಯ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆಗಳು ಪ್ರಧಾನಿ ಶೇಖ್ ಹಸೀನಾ ಅವರ ಆದೇಶ ಮತ್ತು ಅವರ ಅರಿವುನಲ್ಲೇ ನಡೆದಿದೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದೀಗ ತಿಂಗಳುಗಳ ಕಾಲ ನಡೆದ ವಿಚಾರಣೆಯಲ್ಲಿ ಉತ್ಪಾದಿಸಲಾದ ಸಾಕ್ಷ್ಯಗಳು, ಭದ್ರತಾ ಸಿಬ್ಬಂದಿಯ ಹೇಳಿಕೆಗಳು ಮತ್ತು ತನಿಖಾ ವರದಿಗಳ ಆಧಾರದಲ್ಲಿ ನ್ಯಾಯಾಲಯವು ಹಸೀನಾ ಅವರ ಪಾತ್ರವನ್ನು ಉಲ್ಲೇಖಿಸಿದೆ. ಪ್ರತಿಭಟನೆಗಳನ್ನು ಕುಂಠಿತಗೊಳಿಸುವ ಹೆಸರಿನಲ್ಲಿ ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗಕ್ಕೆ ಮುಂದಾಗಿದ್ದವು ಎಂಬ ವಿಚಾರವನ್ನು ನ್ಯಾಯಾಲಯ ವಿಶೇಷವಾಗಿ ಉಲ್ಲೇಖಿಸಿದೆ.

ಶೇಖ್ ಹಸೀನಾ ಮಾತ್ರವಲ್ಲದೇ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

7 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

10 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago