ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ.
ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್ನಲ್ಲಿ ಜನಗಣತಿ ಆರಂಭವಾಗಲಿದೆ.
ಜನಗಣತಿಗೆ 18 ತಿಂಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಜನಗಣತಿ ವರದಿಯು 2026ರ ಮಾರ್ಚ್ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಭಾರತದ ಜನರು ಮತ್ತು ಅವರ ಗುಣಲಕ್ಷಣಗಳ ಕುರಿತು ದತ್ತಾಂಶ ಸಹಿತ ಸಮಗ್ರವಾಗಿ ಲಭ್ಯವಾಗುವ ಏಕೈಕ ಮಾಹಿತಿಯೇ ಈ ಜನಗಣತಿ. ಜನಗಣತಿ ಸಂದರ್ಭದಲ್ಲಿ ಸಂಗ್ರಹಿಸುವ ಪ್ರತಿಯೊಬ್ಬರ ಮಾಹಿತಿಯು ಜನಸಂಖ್ಯೆಯ ಬೆಳವಣಿಗೆ ಮತ್ತು ಅದರ ಲಕ್ಷಣ ಹಾಗೂ ಬೆಳವಣಿಗೆಯ ಅಂದಾಜು ಲೆಕ್ಕಾಚಾರಕ್ಕೆ ನೆರವಾಗಲಿದೆ.
ವ್ಯಾಪಾರ ಕ್ಷೇತ್ರ ಹಾಗೂ ಮಾರುಕಟ್ಟೆಯಲ್ಲಿ ಹೊಸ ಸಾಧ್ಯತೆಯ ಕುರಿತು ಯೋಜನೆ ರೂಪಿಸಲು ಜನಗಣತಿಯ ಮಾಹಿತಿ ಅಗತ್ಯ. ಹಣಕಾಸು ಆಯೋಗವು ಜನಗಣತಿಯ ಮಾಹಿತಿ ಆಧರಿಸಿಯೇ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುತ್ತದೆ.
ದತ್ತಾಂಶ ಸಂಗ್ರಹದ ಆಧಾರದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಈ ಹಿಂದಿನ ಗಣತಿಗಿಂತ ಭಿನ್ನವಾಗಿರಲಿದೆ ಎಂದೇ ಹೇಳಲಾಗುತ್ತಿದೆ.
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…
ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…
ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…
ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…