ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ.
ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್ನಲ್ಲಿ ಜನಗಣತಿ ಆರಂಭವಾಗಲಿದೆ.
ಜನಗಣತಿಗೆ 18 ತಿಂಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಜನಗಣತಿ ವರದಿಯು 2026ರ ಮಾರ್ಚ್ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಭಾರತದ ಜನರು ಮತ್ತು ಅವರ ಗುಣಲಕ್ಷಣಗಳ ಕುರಿತು ದತ್ತಾಂಶ ಸಹಿತ ಸಮಗ್ರವಾಗಿ ಲಭ್ಯವಾಗುವ ಏಕೈಕ ಮಾಹಿತಿಯೇ ಈ ಜನಗಣತಿ. ಜನಗಣತಿ ಸಂದರ್ಭದಲ್ಲಿ ಸಂಗ್ರಹಿಸುವ ಪ್ರತಿಯೊಬ್ಬರ ಮಾಹಿತಿಯು ಜನಸಂಖ್ಯೆಯ ಬೆಳವಣಿಗೆ ಮತ್ತು ಅದರ ಲಕ್ಷಣ ಹಾಗೂ ಬೆಳವಣಿಗೆಯ ಅಂದಾಜು ಲೆಕ್ಕಾಚಾರಕ್ಕೆ ನೆರವಾಗಲಿದೆ.
ವ್ಯಾಪಾರ ಕ್ಷೇತ್ರ ಹಾಗೂ ಮಾರುಕಟ್ಟೆಯಲ್ಲಿ ಹೊಸ ಸಾಧ್ಯತೆಯ ಕುರಿತು ಯೋಜನೆ ರೂಪಿಸಲು ಜನಗಣತಿಯ ಮಾಹಿತಿ ಅಗತ್ಯ. ಹಣಕಾಸು ಆಯೋಗವು ಜನಗಣತಿಯ ಮಾಹಿತಿ ಆಧರಿಸಿಯೇ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುತ್ತದೆ.
ದತ್ತಾಂಶ ಸಂಗ್ರಹದ ಆಧಾರದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಈ ಹಿಂದಿನ ಗಣತಿಗಿಂತ ಭಿನ್ನವಾಗಿರಲಿದೆ ಎಂದೇ ಹೇಳಲಾಗುತ್ತಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…