ದೇಶ- ವಿದೇಶ

ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ.

ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್‌ನಲ್ಲಿ ಜನಗಣತಿ ಆರಂಭವಾಗಲಿದೆ.

ಜನಗಣತಿಗೆ 18 ತಿಂಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಜನಗಣತಿ ವರದಿಯು 2026ರ ಮಾರ್ಚ್‌ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಭಾರತದ ಜನರು ಮತ್ತು ಅವರ ಗುಣಲಕ್ಷಣಗಳ ಕುರಿತು ದತ್ತಾಂಶ ಸಹಿತ ಸಮಗ್ರವಾಗಿ ಲಭ್ಯವಾಗುವ ಏಕೈಕ ಮಾಹಿತಿಯೇ ಈ ಜನಗಣತಿ. ಜನಗಣತಿ ಸಂದರ್ಭದಲ್ಲಿ ಸಂಗ್ರಹಿಸುವ ಪ್ರತಿಯೊಬ್ಬರ ಮಾಹಿತಿಯು ಜನಸಂಖ್ಯೆಯ ಬೆಳವಣಿಗೆ ಮತ್ತು ಅದರ ಲಕ್ಷಣ ಹಾಗೂ ಬೆಳವಣಿಗೆಯ ಅಂದಾಜು ಲೆಕ್ಕಾಚಾರಕ್ಕೆ ನೆರವಾಗಲಿದೆ.

ವ್ಯಾಪಾರ ಕ್ಷೇತ್ರ ಹಾಗೂ ಮಾರುಕಟ್ಟೆಯಲ್ಲಿ ಹೊಸ ಸಾಧ್ಯತೆಯ ಕುರಿತು ಯೋಜನೆ ರೂಪಿಸಲು ಜನಗಣತಿಯ ಮಾಹಿತಿ ಅಗತ್ಯ. ಹಣಕಾಸು ಆಯೋಗವು ಜನಗಣತಿಯ ಮಾಹಿತಿ ಆಧರಿಸಿಯೇ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುತ್ತದೆ.

ದತ್ತಾಂಶ ಸಂಗ್ರಹದ ಆಧಾರದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಈ ಹಿಂದಿನ ಗಣತಿಗಿಂತ ಭಿನ್ನವಾಗಿರಲಿದೆ ಎಂದೇ ಹೇಳಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago