ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ.
ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್ನಲ್ಲಿ ಜನಗಣತಿ ಆರಂಭವಾಗಲಿದೆ.
ಜನಗಣತಿಗೆ 18 ತಿಂಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಜನಗಣತಿ ವರದಿಯು 2026ರ ಮಾರ್ಚ್ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಭಾರತದ ಜನರು ಮತ್ತು ಅವರ ಗುಣಲಕ್ಷಣಗಳ ಕುರಿತು ದತ್ತಾಂಶ ಸಹಿತ ಸಮಗ್ರವಾಗಿ ಲಭ್ಯವಾಗುವ ಏಕೈಕ ಮಾಹಿತಿಯೇ ಈ ಜನಗಣತಿ. ಜನಗಣತಿ ಸಂದರ್ಭದಲ್ಲಿ ಸಂಗ್ರಹಿಸುವ ಪ್ರತಿಯೊಬ್ಬರ ಮಾಹಿತಿಯು ಜನಸಂಖ್ಯೆಯ ಬೆಳವಣಿಗೆ ಮತ್ತು ಅದರ ಲಕ್ಷಣ ಹಾಗೂ ಬೆಳವಣಿಗೆಯ ಅಂದಾಜು ಲೆಕ್ಕಾಚಾರಕ್ಕೆ ನೆರವಾಗಲಿದೆ.
ವ್ಯಾಪಾರ ಕ್ಷೇತ್ರ ಹಾಗೂ ಮಾರುಕಟ್ಟೆಯಲ್ಲಿ ಹೊಸ ಸಾಧ್ಯತೆಯ ಕುರಿತು ಯೋಜನೆ ರೂಪಿಸಲು ಜನಗಣತಿಯ ಮಾಹಿತಿ ಅಗತ್ಯ. ಹಣಕಾಸು ಆಯೋಗವು ಜನಗಣತಿಯ ಮಾಹಿತಿ ಆಧರಿಸಿಯೇ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುತ್ತದೆ.
ದತ್ತಾಂಶ ಸಂಗ್ರಹದ ಆಧಾರದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಈ ಹಿಂದಿನ ಗಣತಿಗಿಂತ ಭಿನ್ನವಾಗಿರಲಿದೆ ಎಂದೇ ಹೇಳಲಾಗುತ್ತಿದೆ.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…