ದೇಶ- ವಿದೇಶ

ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ.

ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್‌ನಲ್ಲಿ ಜನಗಣತಿ ಆರಂಭವಾಗಲಿದೆ.

ಜನಗಣತಿಗೆ 18 ತಿಂಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಜನಗಣತಿ ವರದಿಯು 2026ರ ಮಾರ್ಚ್‌ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಭಾರತದ ಜನರು ಮತ್ತು ಅವರ ಗುಣಲಕ್ಷಣಗಳ ಕುರಿತು ದತ್ತಾಂಶ ಸಹಿತ ಸಮಗ್ರವಾಗಿ ಲಭ್ಯವಾಗುವ ಏಕೈಕ ಮಾಹಿತಿಯೇ ಈ ಜನಗಣತಿ. ಜನಗಣತಿ ಸಂದರ್ಭದಲ್ಲಿ ಸಂಗ್ರಹಿಸುವ ಪ್ರತಿಯೊಬ್ಬರ ಮಾಹಿತಿಯು ಜನಸಂಖ್ಯೆಯ ಬೆಳವಣಿಗೆ ಮತ್ತು ಅದರ ಲಕ್ಷಣ ಹಾಗೂ ಬೆಳವಣಿಗೆಯ ಅಂದಾಜು ಲೆಕ್ಕಾಚಾರಕ್ಕೆ ನೆರವಾಗಲಿದೆ.

ವ್ಯಾಪಾರ ಕ್ಷೇತ್ರ ಹಾಗೂ ಮಾರುಕಟ್ಟೆಯಲ್ಲಿ ಹೊಸ ಸಾಧ್ಯತೆಯ ಕುರಿತು ಯೋಜನೆ ರೂಪಿಸಲು ಜನಗಣತಿಯ ಮಾಹಿತಿ ಅಗತ್ಯ. ಹಣಕಾಸು ಆಯೋಗವು ಜನಗಣತಿಯ ಮಾಹಿತಿ ಆಧರಿಸಿಯೇ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುತ್ತದೆ.

ದತ್ತಾಂಶ ಸಂಗ್ರಹದ ಆಧಾರದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಈ ಹಿಂದಿನ ಗಣತಿಗಿಂತ ಭಿನ್ನವಾಗಿರಲಿದೆ ಎಂದೇ ಹೇಳಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago