ಹೊಸದಿಲ್ಲಿ : ದೇಶಾದ್ಯಂತ ಸೋಮಾವರ ಬೆಳ್ಳಂಬೆಳ್ಳಗ್ಗನೆ 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು. ಕೆಂಪು ಕೋಟೆ ಪ್ರದೇಶವು ಸಂಜೆಯ ಸಮಯದಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಜನರು ದೃಶ್ಯವೀಕ್ಷಣೆಗೆ ಭೇಟಿ ನೀಡುತ್ತಾರೆ.
ಇದನ್ನೂ ಓದಿ:-ಹಜ್ ಒಪ್ಪಂದಕ್ಕೆ ಭಾರತ ಸಹಿ
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಮೂರರಿಂದ 6 ಕಾರು, 3 ಆಟೋ ಸೇರಿ ಹಲವು ವಾಹನಗಳು ಬೆಂಕಿಯಿಂದ ಹೊತ್ತಿ ಹುರಿಯುತ್ತಿವೆ. ಬೆಂಕಿ ನಂದಿಸಲು ದೆಹಲಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಘಟನೆ ನಂತರ ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿಗದೆ. ಘಟನಾ ಸ್ಥಳಕ್ಕೆ NSG ಮತ್ತು NIA ತಂಡಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…