ಚೆನ್ನೈ: ಮೈಸೂರಿನಿಂದ ದರ್ಭಾಂಗ್ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್ಪ್ರೆಸ್ ರೈಲು, ಚೆನ್ನೈ ಸಮೀಪದ ಗುಮ್ಮುಡಿಪೂಂಡಿಯ ಬಳಿ ಶುಕ್ರವಾರ ರಾತ್ರಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13ಬೋಗಿಗಳು ಹಳಿತಪ್ಪಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಹೊತ್ತಿ ಉರಿದಿವೆ.
ರಾತ್ರಿ ಸು.8:28ರ ವೇಳೆಗೆ ಘಟನೆ ನಡೆದಿದ್ದು, ಕನಿಷ್ಟ 19ಮಂದಿಗೆ ಗಾಯವಾಗಿದೆ. ಅಪಘಾಯಕ್ಕೀಡಾದ ರೈಲು75 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
ರೈಲು ಪೊನ್ನೇರಿ ನಿಲ್ದಾಣ ದಾಟಿದ್ದ ವೇಳೆಗೆ, ಕವರೈಪೆಟ್ಟೈ ನಿಲ್ದಾಣ ಪ್ರವೇಶಿಸಿಲು ಗ್ರೀನ್ ಸಿಗ್ಲನ್ ನೀಡಲಾಗಿತ್ತು. ಈ ಪ್ರಕಾರ ಮುಖ್ಯ ಮಾರ್ಗಕ್ಕೆ ಹೋಗುವ ಬದಲು, ಲೂಪ ಹಳಿಗೆ ಪ್ರವೇಶಿಸಿ, ಆ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ. ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಮಿಳುನಾಡು ಸರ್ಕಾರದ ಮೂಲಗಳು ತಿಳಿಸಿವೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…