ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್ಮೇಕರ್ನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದು, ʼಖರ್ಗೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಶೀಘ್ರ ಕೆಲಸ ಆರಂಭಿಸುವ ನಿರೀಕ್ಷೆ ಇದೆ’ ಎಂದು ಹೇಳಿದೆ.
ದಿಢೀರ್ ಉಸಿರಾಟದ ಸಮಸ್ಯೆಗೆ ಸಿಲುಕಿದ್ದ ಖರ್ಗೆ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ್ದ ವೈದ್ಯರು ಹೃದಯ ಬಡಿತದಲ್ಲಿ ಏರುಪೇರಾಗಿರುವುದು ಪತ್ತೆ ಮಾಡಿದ್ದರು.
ಇದನ್ನು ಓದಿ : ಉಸಿರಾಟದ ಸಮಸ್ಯೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಬಳಿಕ ಬುಧವಾರ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ, ಹೃದಯದ ಬಡಿತ ನಿಯಂತ್ರಣಕ್ಕೆ ತರುವಂಥ ಶಾಶ್ವತ ಪೇಸ್ ಮೇಕರ್ ಅಳವಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದ ನಂತರ ಗಣ್ಯರು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರು ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ, ಧೀರ್ಘಾಯುಷ್ಯಕ್ಕೆ ಹಾರೈಸಿದ್ದಾರೆ.
ಈ ನಡುವೆ, ಸಚಿವ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದಾಗಿ ಅವರಿಗೆ ಪೇಸ್ಮೇಕರ್ ಅಳವಡಿಕೆಗೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಶಸ್ತ್ರಚಿಕಿತ್ಸೆ ಮೂಲಕ ಪೇಸ್ಮೇಕರ್ ಅಳವಡಿಸಲಾಗಿದೆ. ಅದನ್ನು ಹೊರತುಪಡಿಸಿ ಬೇರೆ ಸಮಸ್ಯೆಯಿಲ್ಲ. ವೈದ್ಯರು ಎರಡೂರು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ. ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…
ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…
ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ನ್ನು 96 ರನ್ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್ನಲ್ಲಿ…