ಕಳೆದ ಭಾನುವಾರ ( ಡಿಸೆಂಬರ್ 3 ) ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿತ್ತು. ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವ ಅರ್ಹತೆ ಗಿಟ್ಟಿಸಿಕೊಂಡಿತು.
ಕೇವಲ ರಾಜಸ್ಥಾನ ಮಾತ್ರವಲ್ಲದೇ ಛತ್ತೀಸ್ ಘಡ ಹಾಗೂ ಮಧ್ಯ ಪ್ರದೇಶದಲ್ಲೂ ಸಹ ಬಿಜೆಪಿ ಜಯ ಸಾಧಿಸಿತು. ಈ ಬೃಹತ್ ಗೆಲುವಿನ ಬಳಿಕ ಯಾರಿಗೆ ಈ ರಾಜ್ಯಗಳ ಸಿಎಂ ಜವಾಬ್ದಾರಿಯನ್ನು ವಹಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಮುಂದಿರುವ ಸವಾಲಾಗಿದೆ.
ಈ ವಿಷಯದ ಕುರಿತಾಗಿ ನಾಳೆ ಸಭೆ ನಡೆಯಲಿದ್ದು, ಇಂದು ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ವೈರಲ್ ಆಗಿದೆ. ಬಿಜೆಪಿ ಪಕ್ಷದ ಮಹಾಂತ್ ಬಾಲಕನಾಥ್ ಯೋಗಿ ರಾಜಸ್ಥಾನದ ಮುಖ್ಯಮಂತ್ರಿ ಎಂದು ಬಿಜೆಪಿ ಆಯ್ಕೆ ಮಾಡಿದೆ ಎಂದು ಉಲ್ಲೇಖಿಸಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಪತ್ರ ನೋಡಿದ ಹಲವರು ಯೋಗಿ ಫೋಟೊ ಹಂಚಿಕೊಂಡು ಶುಭವನ್ನೂ ಸಹ ಕೋರಿದ್ದಾರೆ.
ಆದರೆ ಇದರ ಹಿಂದಿನ ಸತ್ಯಾಂಶ ಬೇರೆಯದ್ದೇ ಇದೆ. ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಈ ಪತ್ರವನ್ನು ವೈರಲ್ ಮಾಡಿದ್ದಾರೆ. ಹೀಗೆ ಪತ್ರವೊಂದು ವೈರಲ್ ಆಗ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ರಾಜಸ್ಥಾನ ಬಿಜೆಪಿ ಇದು ಸುಳ್ಳು ಎಂಬ ವಿಷಯವನ್ನು ಟ್ವಿಟರ್ ಮೂಲಕ ತಿಳಿಸಿದೆ.
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…