ಕಳೆದ ಭಾನುವಾರ ( ಡಿಸೆಂಬರ್ 3 ) ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿತ್ತು. ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವ ಅರ್ಹತೆ ಗಿಟ್ಟಿಸಿಕೊಂಡಿತು.
ಕೇವಲ ರಾಜಸ್ಥಾನ ಮಾತ್ರವಲ್ಲದೇ ಛತ್ತೀಸ್ ಘಡ ಹಾಗೂ ಮಧ್ಯ ಪ್ರದೇಶದಲ್ಲೂ ಸಹ ಬಿಜೆಪಿ ಜಯ ಸಾಧಿಸಿತು. ಈ ಬೃಹತ್ ಗೆಲುವಿನ ಬಳಿಕ ಯಾರಿಗೆ ಈ ರಾಜ್ಯಗಳ ಸಿಎಂ ಜವಾಬ್ದಾರಿಯನ್ನು ವಹಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಮುಂದಿರುವ ಸವಾಲಾಗಿದೆ.
ಈ ವಿಷಯದ ಕುರಿತಾಗಿ ನಾಳೆ ಸಭೆ ನಡೆಯಲಿದ್ದು, ಇಂದು ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ವೈರಲ್ ಆಗಿದೆ. ಬಿಜೆಪಿ ಪಕ್ಷದ ಮಹಾಂತ್ ಬಾಲಕನಾಥ್ ಯೋಗಿ ರಾಜಸ್ಥಾನದ ಮುಖ್ಯಮಂತ್ರಿ ಎಂದು ಬಿಜೆಪಿ ಆಯ್ಕೆ ಮಾಡಿದೆ ಎಂದು ಉಲ್ಲೇಖಿಸಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಪತ್ರ ನೋಡಿದ ಹಲವರು ಯೋಗಿ ಫೋಟೊ ಹಂಚಿಕೊಂಡು ಶುಭವನ್ನೂ ಸಹ ಕೋರಿದ್ದಾರೆ.
ಆದರೆ ಇದರ ಹಿಂದಿನ ಸತ್ಯಾಂಶ ಬೇರೆಯದ್ದೇ ಇದೆ. ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಈ ಪತ್ರವನ್ನು ವೈರಲ್ ಮಾಡಿದ್ದಾರೆ. ಹೀಗೆ ಪತ್ರವೊಂದು ವೈರಲ್ ಆಗ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ರಾಜಸ್ಥಾನ ಬಿಜೆಪಿ ಇದು ಸುಳ್ಳು ಎಂಬ ವಿಷಯವನ್ನು ಟ್ವಿಟರ್ ಮೂಲಕ ತಿಳಿಸಿದೆ.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…