ಕಳೆದ ಭಾನುವಾರ ( ಡಿಸೆಂಬರ್ 3 ) ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿತ್ತು. ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವ ಅರ್ಹತೆ ಗಿಟ್ಟಿಸಿಕೊಂಡಿತು.
ಕೇವಲ ರಾಜಸ್ಥಾನ ಮಾತ್ರವಲ್ಲದೇ ಛತ್ತೀಸ್ ಘಡ ಹಾಗೂ ಮಧ್ಯ ಪ್ರದೇಶದಲ್ಲೂ ಸಹ ಬಿಜೆಪಿ ಜಯ ಸಾಧಿಸಿತು. ಈ ಬೃಹತ್ ಗೆಲುವಿನ ಬಳಿಕ ಯಾರಿಗೆ ಈ ರಾಜ್ಯಗಳ ಸಿಎಂ ಜವಾಬ್ದಾರಿಯನ್ನು ವಹಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಮುಂದಿರುವ ಸವಾಲಾಗಿದೆ.
ಈ ವಿಷಯದ ಕುರಿತಾಗಿ ನಾಳೆ ಸಭೆ ನಡೆಯಲಿದ್ದು, ಇಂದು ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ವೈರಲ್ ಆಗಿದೆ. ಬಿಜೆಪಿ ಪಕ್ಷದ ಮಹಾಂತ್ ಬಾಲಕನಾಥ್ ಯೋಗಿ ರಾಜಸ್ಥಾನದ ಮುಖ್ಯಮಂತ್ರಿ ಎಂದು ಬಿಜೆಪಿ ಆಯ್ಕೆ ಮಾಡಿದೆ ಎಂದು ಉಲ್ಲೇಖಿಸಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಪತ್ರ ನೋಡಿದ ಹಲವರು ಯೋಗಿ ಫೋಟೊ ಹಂಚಿಕೊಂಡು ಶುಭವನ್ನೂ ಸಹ ಕೋರಿದ್ದಾರೆ.
ಆದರೆ ಇದರ ಹಿಂದಿನ ಸತ್ಯಾಂಶ ಬೇರೆಯದ್ದೇ ಇದೆ. ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಈ ಪತ್ರವನ್ನು ವೈರಲ್ ಮಾಡಿದ್ದಾರೆ. ಹೀಗೆ ಪತ್ರವೊಂದು ವೈರಲ್ ಆಗ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ರಾಜಸ್ಥಾನ ಬಿಜೆಪಿ ಇದು ಸುಳ್ಳು ಎಂಬ ವಿಷಯವನ್ನು ಟ್ವಿಟರ್ ಮೂಲಕ ತಿಳಿಸಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…