ದೇಶ- ವಿದೇಶ

ಜಾತಿ ಕಾರಣಕ್ಕೆ ಪ್ರಿಯಕರನನ್ನು ಕೊಂದ ಯುವತಿ ಕುಟುಂಬಸ್ಥರು : ಮೃತದೇಹವನ್ನೇ ಮದುವೆಯಾದ ಪ್ರಿಯತಮೆ..!

ನಾಂದೇಡ್‌ : ಪ್ರೀತಿ ಹೆಸರಲ್ಲಿ ಹುಡುಗ-ಹುಡುಗಿ ಇಬ್ಬರು ಮೋಸ ಮಾಡುವ ಈ ಹೊತ್ತಿನಲ್ಲಿ ನಿಜವಾದ ಪ್ರೀತಿ ಸಿಗುವುದು ಬಲು ಅಪರೂಪ. ಪ್ರೀತಿ ಸಿಕ್ಕರೂ ಅದನ್ನು ಕೊನೆಯವರೆಗೂ ಉಳಿಸಿಕೊಳ್ಳುವುದು ನಿಜವಾದ ಸವಾಲು. ಎಷ್ಟೋ ಸಂಬಂಧಗಳಿಗೆ ಜಾತಿ, ಧರ್ಮ, ಬಣ್ಣ, ವೃತ್ತಿ, ಮನೆಯವರ ವಿರೋಧ ಅಡ್ಡಿಯಾಗುತ್ತದೆ. ಇವೆಲ್ಲವೂ ಮೀರಿ ನಿಲ್ಲುವ ಸಂಬಂಧಗಳು ಸಿಗುವುದು ಅಪರೂಪ. ಆದರೆ, ಇಲ್ಲೊಂದು ಘಟನೆಯಲ್ಲಿ ಪ್ರಿಯಕರ ಇಲ್ಲದಿದ್ರೂ, ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿ ನಮ್ಮ ಸಂಬಂಧ ಶಾಶ್ವತವೆಂದು ಸಾರಿರುವ ಪ್ರಸಂಗ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದಿದೆ.

ಘಟನೆ ವಿವರ ;
ಆಂಚಲ್ – ಸಕ್ಷಾಮ್ (20) ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಸಹೋದರರ ಮೂಲಕ ಆಂಚಲ್‌ ಸಕ್ಷಾಮ್‌ನನ್ನು ಭೇಟಿ ಆಗಿದ್ದಳು. ಅಲ್ಲಿಂದ ಶುರುವಾದ ಪರಿಚಯ ಪ್ರೀತಿಗೆ ತಿರುಗಿದೆ.

ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಇಬ್ಬರ ಸಂಬಂಧಕ್ಕೆ ಇತ್ತೀಚೆಗೆ ಮನೆಯವರೇ ವಿರೋಧ ವ್ಯಕ್ತಪಡಿಸಿದ್ದರು. ಆಂಚಲ್‌ ಕುಟುಂಬದವರು ಸಂಬಂಧವನ್ನು ವಿರೋಧಿಸುತ್ತಿದ್ದರು. ಆದರೆ ಆಂಚಲ್‌ ಏನೇ ಆದರೂ ಸಕ್ಷಾಮ್‌ನನ್ನೇ ಮದುವೆ ಆಗೋದಾಗಿ ಮನೆಯಲ್ಲಿ ಹೇಳಿದ್ದಳು.

ಆಂಚಲ್‌ ಸಕ್ಷಾಮ್‌ ಜತೆ ಮದುವೆ ಆಗಲು ಸಿದ್ಧಳಾಗಿದ್ದಳು. ಈ ವಿಚಾರ ಆಕೆಯ ಮನೆಯವರಿಗೆ ಕೋಪ ತರಿಸಿತ್ತು. ಸಕ್ಷಾಮ್‌ ಜತೆ ಸಂಬಂಧ ಮುಂದುವರೆಸಬೇಡ ಎಂದು ಮನೆಯವರು ಹಲವು ಬಾರಿ ಹೇಳಿದ್ದರೂ, ಆಂಚಲ್‌ ಕೇಳಿರಲಿಲ್ಲ. ಸಕ್ಷಾಮ್‌ ಬೇರೆ ಜಾತಿಯ ಹುಡುಗ ಆದ ಕಾರಣ ಆಂಚಲ್‌ ಮನೆಯವರಿಗೆ ಈ ಸಂಬಂಧ ಇಷ್ಟವಿರಲಿಲ್ಲ.

ಆಂಚಲ್‌ – ಸಕ್ಷಾಮ್‌ ಸಂಬಂಧವನ್ನು ಮುರಿಯಬೇಕೆನ್ನುವ ನಿಟ್ಟಿನಲ್ಲಿ, ಆಕೆಯ ಕುಟುಂಬಸ್ಥರು ನ.27 ರಂದು ಸಕ್ಷಾಮ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಆತನಿಗೆ ಹೊಡೆದು ತಲೆಗೆ ಗುಂಡು ಹಾರಿಸಿ, ಕಲ್ಲಿನಿಂದ ತಲೆ ಜಜ್ಜಿ ಭೀಕರವಾಗಿ ಕೃತ್ಯವೆಸಗಿದ್ದಾರೆ.

ಪ್ರಿಯಕರ ಇನ್ನಿಲ್ಲವೆನ್ನುವ ವಿಚಾರ ತಿಳಿದು ದುಃಖದಲ್ಲಿ ಕುಸಿದ ಆಂಚಲ್‌, ಆತನನ್ನು ಕೊನೆಯ ಬಾರಿ ನೋಡಲು ಆತನ ಮನೆಗೆ ಭೇಟಿ ನೀಡಿದ್ದಾಳೆ. ಪ್ರಿಯಕರನ ಮೃತದೇಹವನ್ನು ಅಪ್ಪಿಕೊಂಡು ಮೃತ ದೇಹಕ್ಕೆ ಅರಿಶಿನ, ಹಣೆಗೆ ಸಿಂಧೂರ ಹಚ್ಚಿ, ಮೃತ ಗೆಳೆಯನ ಜತೆ ಮದುವೆ ಆಗಿದ್ದಾಳೆ.

ನಾನು ಬದುಕಿರುವವರೆಗೂ ನಿನ್ನ ಪತ್ನಿಯಾಗಿಯೇ ಇರುತ್ತೇನೆ ಎಂದು ಆಂಚಲ್‌ ಹೇಳಿದ್ದಾಳೆ. “ಸಾಕ್ಷಮ್ ಸಾವಿನಲ್ಲೂ ನಮ್ಮ ಪ್ರೀತಿ ಗೆದ್ದಿತು, ಮತ್ತು ನನ್ನ ತಂದೆ ಮತ್ತು ಸಹೋದರರು ಸೋತರು” ಎಂದು ಆಂಚಲ್‌ ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನನ್ನ ಪ್ರಿಯಕರನಿಗೆ ಈ ರೀತಿ ಮಾಡಿದವರಿಗೆ ಮರಣದಂಡನೆ ನೀಡಬೇಕೆಂದು ಆಂಚಲ್‌ ತನ್ನ ಮನೆಯವರ ವಿರುದ್ಧವೇ ಆಕ್ರೋಶದಿಂದ ಮಾತನಾಡಿದ್ದಾಳೆ.

ಈ ಸಂಬಂಧ ಪೊಲೀಸರು ಆರು ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

39 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

50 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago