ದೇಶ- ವಿದೇಶ

ಜಾತಿ ಕಾರಣಕ್ಕೆ ಪ್ರಿಯಕರನನ್ನು ಕೊಂದ ಯುವತಿ ಕುಟುಂಬಸ್ಥರು : ಮೃತದೇಹವನ್ನೇ ಮದುವೆಯಾದ ಪ್ರಿಯತಮೆ..!

ನಾಂದೇಡ್‌ : ಪ್ರೀತಿ ಹೆಸರಲ್ಲಿ ಹುಡುಗ-ಹುಡುಗಿ ಇಬ್ಬರು ಮೋಸ ಮಾಡುವ ಈ ಹೊತ್ತಿನಲ್ಲಿ ನಿಜವಾದ ಪ್ರೀತಿ ಸಿಗುವುದು ಬಲು ಅಪರೂಪ. ಪ್ರೀತಿ ಸಿಕ್ಕರೂ ಅದನ್ನು ಕೊನೆಯವರೆಗೂ ಉಳಿಸಿಕೊಳ್ಳುವುದು ನಿಜವಾದ ಸವಾಲು. ಎಷ್ಟೋ ಸಂಬಂಧಗಳಿಗೆ ಜಾತಿ, ಧರ್ಮ, ಬಣ್ಣ, ವೃತ್ತಿ, ಮನೆಯವರ ವಿರೋಧ ಅಡ್ಡಿಯಾಗುತ್ತದೆ. ಇವೆಲ್ಲವೂ ಮೀರಿ ನಿಲ್ಲುವ ಸಂಬಂಧಗಳು ಸಿಗುವುದು ಅಪರೂಪ. ಆದರೆ, ಇಲ್ಲೊಂದು ಘಟನೆಯಲ್ಲಿ ಪ್ರಿಯಕರ ಇಲ್ಲದಿದ್ರೂ, ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿ ನಮ್ಮ ಸಂಬಂಧ ಶಾಶ್ವತವೆಂದು ಸಾರಿರುವ ಪ್ರಸಂಗ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದಿದೆ.

ಘಟನೆ ವಿವರ ;
ಆಂಚಲ್ – ಸಕ್ಷಾಮ್ (20) ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಸಹೋದರರ ಮೂಲಕ ಆಂಚಲ್‌ ಸಕ್ಷಾಮ್‌ನನ್ನು ಭೇಟಿ ಆಗಿದ್ದಳು. ಅಲ್ಲಿಂದ ಶುರುವಾದ ಪರಿಚಯ ಪ್ರೀತಿಗೆ ತಿರುಗಿದೆ.

ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಇಬ್ಬರ ಸಂಬಂಧಕ್ಕೆ ಇತ್ತೀಚೆಗೆ ಮನೆಯವರೇ ವಿರೋಧ ವ್ಯಕ್ತಪಡಿಸಿದ್ದರು. ಆಂಚಲ್‌ ಕುಟುಂಬದವರು ಸಂಬಂಧವನ್ನು ವಿರೋಧಿಸುತ್ತಿದ್ದರು. ಆದರೆ ಆಂಚಲ್‌ ಏನೇ ಆದರೂ ಸಕ್ಷಾಮ್‌ನನ್ನೇ ಮದುವೆ ಆಗೋದಾಗಿ ಮನೆಯಲ್ಲಿ ಹೇಳಿದ್ದಳು.

ಆಂಚಲ್‌ ಸಕ್ಷಾಮ್‌ ಜತೆ ಮದುವೆ ಆಗಲು ಸಿದ್ಧಳಾಗಿದ್ದಳು. ಈ ವಿಚಾರ ಆಕೆಯ ಮನೆಯವರಿಗೆ ಕೋಪ ತರಿಸಿತ್ತು. ಸಕ್ಷಾಮ್‌ ಜತೆ ಸಂಬಂಧ ಮುಂದುವರೆಸಬೇಡ ಎಂದು ಮನೆಯವರು ಹಲವು ಬಾರಿ ಹೇಳಿದ್ದರೂ, ಆಂಚಲ್‌ ಕೇಳಿರಲಿಲ್ಲ. ಸಕ್ಷಾಮ್‌ ಬೇರೆ ಜಾತಿಯ ಹುಡುಗ ಆದ ಕಾರಣ ಆಂಚಲ್‌ ಮನೆಯವರಿಗೆ ಈ ಸಂಬಂಧ ಇಷ್ಟವಿರಲಿಲ್ಲ.

ಆಂಚಲ್‌ – ಸಕ್ಷಾಮ್‌ ಸಂಬಂಧವನ್ನು ಮುರಿಯಬೇಕೆನ್ನುವ ನಿಟ್ಟಿನಲ್ಲಿ, ಆಕೆಯ ಕುಟುಂಬಸ್ಥರು ನ.27 ರಂದು ಸಕ್ಷಾಮ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಆತನಿಗೆ ಹೊಡೆದು ತಲೆಗೆ ಗುಂಡು ಹಾರಿಸಿ, ಕಲ್ಲಿನಿಂದ ತಲೆ ಜಜ್ಜಿ ಭೀಕರವಾಗಿ ಕೃತ್ಯವೆಸಗಿದ್ದಾರೆ.

ಪ್ರಿಯಕರ ಇನ್ನಿಲ್ಲವೆನ್ನುವ ವಿಚಾರ ತಿಳಿದು ದುಃಖದಲ್ಲಿ ಕುಸಿದ ಆಂಚಲ್‌, ಆತನನ್ನು ಕೊನೆಯ ಬಾರಿ ನೋಡಲು ಆತನ ಮನೆಗೆ ಭೇಟಿ ನೀಡಿದ್ದಾಳೆ. ಪ್ರಿಯಕರನ ಮೃತದೇಹವನ್ನು ಅಪ್ಪಿಕೊಂಡು ಮೃತ ದೇಹಕ್ಕೆ ಅರಿಶಿನ, ಹಣೆಗೆ ಸಿಂಧೂರ ಹಚ್ಚಿ, ಮೃತ ಗೆಳೆಯನ ಜತೆ ಮದುವೆ ಆಗಿದ್ದಾಳೆ.

ನಾನು ಬದುಕಿರುವವರೆಗೂ ನಿನ್ನ ಪತ್ನಿಯಾಗಿಯೇ ಇರುತ್ತೇನೆ ಎಂದು ಆಂಚಲ್‌ ಹೇಳಿದ್ದಾಳೆ. “ಸಾಕ್ಷಮ್ ಸಾವಿನಲ್ಲೂ ನಮ್ಮ ಪ್ರೀತಿ ಗೆದ್ದಿತು, ಮತ್ತು ನನ್ನ ತಂದೆ ಮತ್ತು ಸಹೋದರರು ಸೋತರು” ಎಂದು ಆಂಚಲ್‌ ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನನ್ನ ಪ್ರಿಯಕರನಿಗೆ ಈ ರೀತಿ ಮಾಡಿದವರಿಗೆ ಮರಣದಂಡನೆ ನೀಡಬೇಕೆಂದು ಆಂಚಲ್‌ ತನ್ನ ಮನೆಯವರ ವಿರುದ್ಧವೇ ಆಕ್ರೋಶದಿಂದ ಮಾತನಾಡಿದ್ದಾಳೆ.

ಈ ಸಂಬಂಧ ಪೊಲೀಸರು ಆರು ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

14 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

14 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

16 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

16 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

17 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

17 hours ago