ನವದೆಹಲಿ: ರೈತರು ಮತ್ತು ಮೀನುಗಾರರಿಗೆ ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಈ ಹೇಳಿಕೆ ನೀಡುವ ಮೂಲಕ ಅಮೇರಿಕಾಗೆ ಖಡಕ್ ಸಂದೇಶ ರವಾನಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ತಿರುಗೇಟು ನೀಡಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ದುಬಾರಿ ಬೆಲೆ ತೆರಬೇಕಾಗುತ್ತದೆ ಎನ್ನುವುದು ತಿಳಿದಿದ್ದರೂ ರೈತರಿಗಾಗಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸರ್ಕಾರದ ನಿರ್ಧಾರದಿಂದ ಭಾರೀ ಬೆಲೆ ತೆರಬೇಕಾಗುತ್ತದೆ ಎನ್ನುವುದು ನನಗೆ ತಿಳಿದಿದೆ. ಇದಕ್ಕೆ ನಾನು ಸಿದ್ಧನಿದ್ದೇನೆ. ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಎಲ್ಲದಕ್ಕೂ ಸಿದ್ಧವಾಗಿದೆ ಎಂದು ತಿಳಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…