ನವದೆಹಲಿ: ರೈತರು ಮತ್ತು ಮೀನುಗಾರರಿಗೆ ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಈ ಹೇಳಿಕೆ ನೀಡುವ ಮೂಲಕ ಅಮೇರಿಕಾಗೆ ಖಡಕ್ ಸಂದೇಶ ರವಾನಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ತಿರುಗೇಟು ನೀಡಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ದುಬಾರಿ ಬೆಲೆ ತೆರಬೇಕಾಗುತ್ತದೆ ಎನ್ನುವುದು ತಿಳಿದಿದ್ದರೂ ರೈತರಿಗಾಗಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸರ್ಕಾರದ ನಿರ್ಧಾರದಿಂದ ಭಾರೀ ಬೆಲೆ ತೆರಬೇಕಾಗುತ್ತದೆ ಎನ್ನುವುದು ನನಗೆ ತಿಳಿದಿದೆ. ಇದಕ್ಕೆ ನಾನು ಸಿದ್ಧನಿದ್ದೇನೆ. ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಎಲ್ಲದಕ್ಕೂ ಸಿದ್ಧವಾಗಿದೆ ಎಂದು ತಿಳಿಸಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…