ನವದೆಹಲಿ: ರೈತರು ಮತ್ತು ಮೀನುಗಾರರಿಗೆ ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಈ ಹೇಳಿಕೆ ನೀಡುವ ಮೂಲಕ ಅಮೇರಿಕಾಗೆ ಖಡಕ್ ಸಂದೇಶ ರವಾನಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ತಿರುಗೇಟು ನೀಡಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ದುಬಾರಿ ಬೆಲೆ ತೆರಬೇಕಾಗುತ್ತದೆ ಎನ್ನುವುದು ತಿಳಿದಿದ್ದರೂ ರೈತರಿಗಾಗಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸರ್ಕಾರದ ನಿರ್ಧಾರದಿಂದ ಭಾರೀ ಬೆಲೆ ತೆರಬೇಕಾಗುತ್ತದೆ ಎನ್ನುವುದು ನನಗೆ ತಿಳಿದಿದೆ. ಇದಕ್ಕೆ ನಾನು ಸಿದ್ಧನಿದ್ದೇನೆ. ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಎಲ್ಲದಕ್ಕೂ ಸಿದ್ಧವಾಗಿದೆ ಎಂದು ತಿಳಿಸಿದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…