ದೇಶ- ವಿದೇಶ

ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯ ಒಪ್ಪಿದ ವಿತ್ತ ಸಚಿವೆಗೆ ಧನ್ಯವಾದ: ಡಿಸಿಎಂ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದಾರೆ, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್‌ ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ವಿತ್ತ ಸಚಿವೆಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ ಸುರೇಶ್‌ ಅವರ ನಮ್ಮ ತೆರಿಗೆ ನಮ್ಮ ಹಕ್ಕು ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.

ಮೇಕುದಾಟು ಯೋಜನೆ ವಿಚಾರವಾಗಿ ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಈಗ ಮೇಕೆದಾಟು, ಮಹದಾಯಿ ಯೋಜನೆ ನೆನಪಾಗಿದೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವ ಸಮಯದಲ್ಲಿ, ಕಬಾಬ್‌ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಈಗ ಪಾದಯಾತ್ರೆ ಬಗ್ಗೆ ಮಾತಾನಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago