ದೇಶ- ವಿದೇಶ

ಉದ್ಯಮಿಗೆ ವಂಚನೆ ಆರೋಪ: ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ವಿರುದ್ಧ ಎಫ್‌ಐಆರ್‌

ಮುಂಬೈ: ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂಗೂ ಹೆಚ್ಚು ವಂಚನೆ ಮಾಡಿದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ಹಾಗೂ ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ವಂಚನೆಯು ದಂಪತಿಗಳು ಕಾರ್ಯನಿರ್ವಹಿಸಿದ ಸಂಸ್ಥೆಯಾದ ಬೆಸ್ಟ್‌ ಡೀಲ್‌ ಟಿವಿ ಪ್ರೈವೇಟ್‌ ಲಿಮಿಟೆಡ್‌ಗೆ ಸಂಬಂಧಿಸಿದ ಒಪ್ಪಂದಕ್ಕೆ ಸಂಬಂಧ ಪಟ್ಟಿದೆ.

ಶಿಲ್ಪಾ ಶೆಟ್ಟಿ ಹಾಗೂ ರಾಜ್‌ ಕುಂದ್ರಾ ದಂಪತಿಗಳು 2015 ರಿಂದ 2023ರ ನಡುವೆ 60 ಕೋಟಿ ರೂ ವಂಚನೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಉದ್ಯಮಿ ದೀಪಕ್‌ ಕೊಠಾರಿ ಅವರು ಶಿಲ್ಪಾ ಶೆಟ್ಟಿ ಹಾಗೂ ರಾಜ್‌ ಕುಂದ್ರಾ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ದೂರುದಾರ ದೀಪಕ್‌ ಕೊಠಾರಿ, ದಂಪತಿಗಳು ತಮಗೆ 60 ಕೋಟಿ ರೂಗಳಿಗೂ ಹೆಚ್ಚು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣದ ಮೊತ್ತ 10 ಕೋಟಿ ರೂಗಳನ್ನು ಮೀರಿದ್ದರಿಂದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

2 mins ago

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…

8 mins ago

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

9 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago