ಉತ್ತರ ಪ್ರದೇಶ: ವಾರಾಣಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಚಾನಕ್ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 150ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ (ನ.29) ತಡರಾತ್ರಿ ಘಟನೆ ಸಂಭವಿಸಿದೆ. ಈ ಬಗ್ಗೆ ಇಂದು(ನ.30) ಮಾಹಿತಿ ಪಡೆದು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ರೈಲ್ವೆ ರಕ್ಷಣಾ ಪಡೆ, ಸರ್ಕಾರಿ ರೈಲ್ವೆ ಪೊಲೀಸ್ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಅವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ರೈಲ್ವೆ ನೌಕರರಿಗಾಗಿ ವಾಹನ ನಿಲುಗಡೆ ವ್ಯವಸ್ಥೆಯನ್ನು ನಿರ್ಮಿಸಲಾಗಿತ್ತು. ಇದೀಗ ಅಗ್ನಿ ಅವಘಡದಿಂದ ಸಾಕಷ್ಟು ಹಾನಿಯಾಗಿದೆ. ಆದರೆ ಈ ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…