ದೇಶ- ವಿದೇಶ

ನಾಳೆಯಿಂದ 18ನೇ ಲೋಕಸಭೆ ಅಧಿವೇಶನ; ಸ್ಪೀಕರ್‌ ಪಟ್ಟ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸ

ಹೊಸದಿಲ್ಲಿ: 18ನೇ ಲೋಕಸಭೆಯ ಅಧಿವೇಶನ ನಾಳೆಯಿಂದ (ಜೂನ್‌ 24) ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹೊಸ ಸಂಸದರು ಮೊದಲ ಎರಡು ದಿನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ ಆಗಿ ಮಹತಾಬ್‌ ಭತೃಹರಿ ಅವರನ್ನು ನೇಮಕ ಮಾಡಿರುವುದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದೆ.

ಕಾಂಗ್ರೆಸ್‌ನ ಹಿರಿಯ ಸಂಸದ ಕೆ.ಸುರೇಶ್‌ ಅವರು ಲೋಕಸಭೆಯಲ್ಲಿನ ಅತೀ ಹಿರಿಯ ಸದಸ್ಯರಾಗಿದ್ದರೂ ಜಾತಿ ಕಾರಣಕ್ಕಾಗಿ ಅವರನ್ನು ಕಡೆಗಣಿಸಲಾಗಿದೆ. ಬದಲಾಗಿ ಮಹತಾಬ್‌ ಭತೃಹರಿ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್‌ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಮೊದಲ ಎರಡು ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದೇ ಜೂನ್ 26ರಂದು ನೂತನ ಲೋಕಸಭಾ ಅಧ್ಯಕ್ಷರ ಆಯ್ಕೆ ನಡೆಯಲಿದೆ.

ಸ್ಪೀಕರ್‌ ಪಟ್ಟವನ್ನು ಬಿಜೆಪಿ ತನ್ನ ಬಳಿಯೇ ಉಳಿಸಿಕೊಳ್ಳಲು ಹರಸಾಹಸ ನಡೆಸಿದ್ದು, ಎನ್‌ಡಿಎ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಎಸ್‌ ಪಕ್ಷಗಳು ನಮಗೆ ಲೋಕಸಭಾ ಅಧ್ಯಕ್ಷ ಸ್ಥಾನ ನೀಡುವಂತೆ ಪಟ್ಟು ಹಿಡಿದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನೂ ಈ ಬಾರಿ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಪ ಸಭಾಧ್ಯಕ್ಷ ಸ್ಥಾನವನ್ನು ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಟ್ಟು ಕೊಡುವಂತೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.

andolana

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

6 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

6 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

6 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

7 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

7 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

8 hours ago