ದೇಶ- ವಿದೇಶ

ನಾಳೆಯಿಂದ 18ನೇ ಲೋಕಸಭೆ ಅಧಿವೇಶನ; ಸ್ಪೀಕರ್‌ ಪಟ್ಟ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸ

ಹೊಸದಿಲ್ಲಿ: 18ನೇ ಲೋಕಸಭೆಯ ಅಧಿವೇಶನ ನಾಳೆಯಿಂದ (ಜೂನ್‌ 24) ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹೊಸ ಸಂಸದರು ಮೊದಲ ಎರಡು ದಿನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ ಆಗಿ ಮಹತಾಬ್‌ ಭತೃಹರಿ ಅವರನ್ನು ನೇಮಕ ಮಾಡಿರುವುದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದೆ.

ಕಾಂಗ್ರೆಸ್‌ನ ಹಿರಿಯ ಸಂಸದ ಕೆ.ಸುರೇಶ್‌ ಅವರು ಲೋಕಸಭೆಯಲ್ಲಿನ ಅತೀ ಹಿರಿಯ ಸದಸ್ಯರಾಗಿದ್ದರೂ ಜಾತಿ ಕಾರಣಕ್ಕಾಗಿ ಅವರನ್ನು ಕಡೆಗಣಿಸಲಾಗಿದೆ. ಬದಲಾಗಿ ಮಹತಾಬ್‌ ಭತೃಹರಿ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್‌ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಮೊದಲ ಎರಡು ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದೇ ಜೂನ್ 26ರಂದು ನೂತನ ಲೋಕಸಭಾ ಅಧ್ಯಕ್ಷರ ಆಯ್ಕೆ ನಡೆಯಲಿದೆ.

ಸ್ಪೀಕರ್‌ ಪಟ್ಟವನ್ನು ಬಿಜೆಪಿ ತನ್ನ ಬಳಿಯೇ ಉಳಿಸಿಕೊಳ್ಳಲು ಹರಸಾಹಸ ನಡೆಸಿದ್ದು, ಎನ್‌ಡಿಎ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಎಸ್‌ ಪಕ್ಷಗಳು ನಮಗೆ ಲೋಕಸಭಾ ಅಧ್ಯಕ್ಷ ಸ್ಥಾನ ನೀಡುವಂತೆ ಪಟ್ಟು ಹಿಡಿದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನೂ ಈ ಬಾರಿ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಪ ಸಭಾಧ್ಯಕ್ಷ ಸ್ಥಾನವನ್ನು ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಟ್ಟು ಕೊಡುವಂತೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

5 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

11 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago