ದೇಶ- ವಿದೇಶ

ಪುಣೆಯಲ್ಲಿ ಶಂಕಿತ ಜಿಬಿಎಸ್ ಸಿಂಡ್ರೋಮ್‌ಗೆ ಮೊದಲ ಬಲಿ

ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ.

ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದು ಶಂಕಿತ ಜಿಬಿಎಸ್‌ನಿಂದ ಮಹಾರಾಷ್ಟ್ರದಲ್ಲಿ ಸಂಭವಿಸಿದ ಮೊದಲ ಸಾವು ಎಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ.

ಇನ್ನು ಪುಣೆಯ ಜಲ ಮೂಲಗಳಿಂದ ಸೋಂಕು ಹರಡಿಸುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ನೀರಿನ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪುಣೆಯ ಪ್ರಮುಖ ನೀರಿನ ಜಲಾಶಯವಾದ ಖಡಕ್ವಾಸ್ಲಾ ಅಣೆಕಟ್ಟಿನ ಬಳಿಯ ಬಾವಿಯಲ್ಲಿ ಇ ಕೋಲಿ ಬ್ಯಾಕ್ಟೀರಿಯಾದ ಮಟ್ಟ ಹೆಚ್ಚಾಗಿದೆ ಎಂದು ತೋರಿಸಲಾಗಿದೆ.

ಇನ್ನು ಸೋಂಕು ಪತ್ತೆಯಾದ ಪ್ರದೇಶಗಳಲ್ಲಿ ಸಾವಿರಾರು ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಮಾಹಿತಿಯ ಪ್ರಕಾರ ಈ ಜಿಬಿಎಸ್‌ ಚಿಕಿತ್ಸೆ ತುಂಬಾ ದುಬಾರಿಯಾಗಿದ್ದು, ಪ್ರತಿ ಇಂಜೆಕ್ಷನ್‌ಗೆ 20,000 ವೆಚ್ಚವಾಗುತ್ತದೆ ಎಂದು ಹೇಳಲಾಗಿದೆ.

ಸೋಂಕಿತರಿಗೆ ದೇಹದ ಭಾಗಗಳಿಗೆ ಮೆದುಳಿನ ಸಂಕೇತಗಳನ್ನು ಸಾಗಿಸುವ ನರಗಳ ಮೇಲೆ ತಪ್ಪಾಗಿ ದಾಳಿ ಮಾಡಿ ದೌರ್ಬಲ್ಯ, ಪಾರ್ಶ್ವವಾಯು ಅಥವಾ ಇತರ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತಿದೆ.

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago