ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ.
ಶಂಕಿತ ಜಿಬಿಎಸ್ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದು ಶಂಕಿತ ಜಿಬಿಎಸ್ನಿಂದ ಮಹಾರಾಷ್ಟ್ರದಲ್ಲಿ ಸಂಭವಿಸಿದ ಮೊದಲ ಸಾವು ಎಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ.
ಇನ್ನು ಪುಣೆಯ ಜಲ ಮೂಲಗಳಿಂದ ಸೋಂಕು ಹರಡಿಸುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ನೀರಿನ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪುಣೆಯ ಪ್ರಮುಖ ನೀರಿನ ಜಲಾಶಯವಾದ ಖಡಕ್ವಾಸ್ಲಾ ಅಣೆಕಟ್ಟಿನ ಬಳಿಯ ಬಾವಿಯಲ್ಲಿ ಇ ಕೋಲಿ ಬ್ಯಾಕ್ಟೀರಿಯಾದ ಮಟ್ಟ ಹೆಚ್ಚಾಗಿದೆ ಎಂದು ತೋರಿಸಲಾಗಿದೆ.
ಇನ್ನು ಸೋಂಕು ಪತ್ತೆಯಾದ ಪ್ರದೇಶಗಳಲ್ಲಿ ಸಾವಿರಾರು ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಮಾಹಿತಿಯ ಪ್ರಕಾರ ಈ ಜಿಬಿಎಸ್ ಚಿಕಿತ್ಸೆ ತುಂಬಾ ದುಬಾರಿಯಾಗಿದ್ದು, ಪ್ರತಿ ಇಂಜೆಕ್ಷನ್ಗೆ 20,000 ವೆಚ್ಚವಾಗುತ್ತದೆ ಎಂದು ಹೇಳಲಾಗಿದೆ.
ಸೋಂಕಿತರಿಗೆ ದೇಹದ ಭಾಗಗಳಿಗೆ ಮೆದುಳಿನ ಸಂಕೇತಗಳನ್ನು ಸಾಗಿಸುವ ನರಗಳ ಮೇಲೆ ತಪ್ಪಾಗಿ ದಾಳಿ ಮಾಡಿ ದೌರ್ಬಲ್ಯ, ಪಾರ್ಶ್ವವಾಯು ಅಥವಾ ಇತರ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತಿದೆ.
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…
ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…
ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…
ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು,…