ದೇಶ- ವಿದೇಶ

ಭಾರತದಲ್ಲಿ ಮೊದಲ ಟೆಸ್ಲಾ ಕಾರು ಮಾರಾಟ : ಸಚಿವರೊಬ್ಬರು ಖರೀದಿ

ಮುಂಬೈ : ಭಾರತದಲ್ಲಿ ಮೊದಲ ಟೆಸ್ಲಾ ಕಾರು ಮಾರಾಟವಾಗಿದೆ. ‘ಮಾಡೆಲ್‌ Y’ ಟೆಸ್ಲಾ ಕಾರನ್ನು ಮಹಾರಾಷ್ಟ್ರದ ಸಚಿವರೊಬ್ಬರು ಖರೀದಿಸಿದ್ದಾರೆ.

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ‘ಟೆಸ್ಲಾ ಎಕ್ಸ್‌ಪೀರಿಯೆನ್ಸ್ ಸೆಂಟರ್’ನಿಂದ ಕಾರು ಮಾರಾಟವಾಗಿದೆ. ಮೊದಲ ಟೆಸ್ಲಾ (ಮಾದರಿ Y) ಕಾರನ್ನು ಮಹಾರಾಷ್ಟ್ರ ರಾಜ್ಯದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರಿಗೆ ಹಸ್ತಾಂತರಿಸಲಾಗಿದೆ.

ಭಾರತದಲ್ಲಿ ಮೊದಲನೆಯದಾದ ‘ಟೆಸ್ಲಾ ಎಕ್ಸ್‌ಪೀರಿಯೆನ್ಸ್ ಸೆಂಟರ್’ ಅನ್ನು ಜುಲೈ 15 ರಂದು ಉದ್ಘಾಟಿಸಲಾಗಿತ್ತು. ‘ಭಾರತದ ಮೊದಲ ಟೆಸ್ಲಾ ಕಾರು ಮಾಡೆಲ್ ವೈ ಖರೀದಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಮತ್ತು ಭಾರತದ ಮೊದಲ ಟೆಸ್ಲಾ ಕಾರಿನ ಮಾಲೀಕ ಪ್ರತಾಪ್ ಸರ್ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಾರಿಗೆ ಸಚಿವನಾಗಿ, ನಾನು ಇದನ್ನು ಖರೀದಿಸಿದ್ದೇನೆ. ಮಹಾರಾಷ್ಟ್ರ ಸರ್ಕಾರ ಯಾವಾಗಲೂ ಪರಿಸರ ಸ್ನೇಹಿ ಕಾರುಗಳನ್ನು ರಸ್ತೆಗಳಿಗೆ ತರಲು ಪ್ರಯತ್ನಿಸುತ್ತದೆ. ಪರಿಸರ ಸ್ನೇಹಿ ವಾಹನಗಳನ್ನು ಸಾಧ್ಯವಾದಷ್ಟು ಬಳಸಲು ನಾನು ಸಾರ್ವಜನಿಕ ಜಾಗೃತಿ ಮೂಡಿಸುತ್ತೇನೆ. ಮುಂದಿನ 10 ವರ್ಷಗಳಲ್ಲಿ ರಸ್ತೆಗಳಲ್ಲಿ ಗರಿಷ್ಠ ಸಂಖ್ಯೆಯ ವಿದ್ಯುತ್ ವಾಹನಗಳನ್ನು ಹೊಂದಲು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ವಿದ್ಯುತ್ ವಾಹನ ತಯಾರಿಕಾ ಕಂಪನಿಗಳಿಗೆ ಎಲ್ಲಾ ಅನುಕೂಲಗಳನ್ನು ಒದಗಿಸಲು ಸಾರಿಗೆ ಇಲಾಖೆ ಪ್ರಯತ್ನಿಸುತ್ತಿದೆ. ಅಂತಹ ವಾಹನಗಳ ಮಾಲೀಕರಿಗೂ ನಾವು ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

2 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

2 hours ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

2 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

2 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

2 hours ago