ದೇಶ- ವಿದೇಶ

ಭಾರತದಲ್ಲಿ ಮೊದಲ ಟೆಸ್ಲಾ ಕಾರು ಮಾರಾಟ : ಸಚಿವರೊಬ್ಬರು ಖರೀದಿ

ಮುಂಬೈ : ಭಾರತದಲ್ಲಿ ಮೊದಲ ಟೆಸ್ಲಾ ಕಾರು ಮಾರಾಟವಾಗಿದೆ. ‘ಮಾಡೆಲ್‌ Y’ ಟೆಸ್ಲಾ ಕಾರನ್ನು ಮಹಾರಾಷ್ಟ್ರದ ಸಚಿವರೊಬ್ಬರು ಖರೀದಿಸಿದ್ದಾರೆ.

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ‘ಟೆಸ್ಲಾ ಎಕ್ಸ್‌ಪೀರಿಯೆನ್ಸ್ ಸೆಂಟರ್’ನಿಂದ ಕಾರು ಮಾರಾಟವಾಗಿದೆ. ಮೊದಲ ಟೆಸ್ಲಾ (ಮಾದರಿ Y) ಕಾರನ್ನು ಮಹಾರಾಷ್ಟ್ರ ರಾಜ್ಯದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರಿಗೆ ಹಸ್ತಾಂತರಿಸಲಾಗಿದೆ.

ಭಾರತದಲ್ಲಿ ಮೊದಲನೆಯದಾದ ‘ಟೆಸ್ಲಾ ಎಕ್ಸ್‌ಪೀರಿಯೆನ್ಸ್ ಸೆಂಟರ್’ ಅನ್ನು ಜುಲೈ 15 ರಂದು ಉದ್ಘಾಟಿಸಲಾಗಿತ್ತು. ‘ಭಾರತದ ಮೊದಲ ಟೆಸ್ಲಾ ಕಾರು ಮಾಡೆಲ್ ವೈ ಖರೀದಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಮತ್ತು ಭಾರತದ ಮೊದಲ ಟೆಸ್ಲಾ ಕಾರಿನ ಮಾಲೀಕ ಪ್ರತಾಪ್ ಸರ್ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಾರಿಗೆ ಸಚಿವನಾಗಿ, ನಾನು ಇದನ್ನು ಖರೀದಿಸಿದ್ದೇನೆ. ಮಹಾರಾಷ್ಟ್ರ ಸರ್ಕಾರ ಯಾವಾಗಲೂ ಪರಿಸರ ಸ್ನೇಹಿ ಕಾರುಗಳನ್ನು ರಸ್ತೆಗಳಿಗೆ ತರಲು ಪ್ರಯತ್ನಿಸುತ್ತದೆ. ಪರಿಸರ ಸ್ನೇಹಿ ವಾಹನಗಳನ್ನು ಸಾಧ್ಯವಾದಷ್ಟು ಬಳಸಲು ನಾನು ಸಾರ್ವಜನಿಕ ಜಾಗೃತಿ ಮೂಡಿಸುತ್ತೇನೆ. ಮುಂದಿನ 10 ವರ್ಷಗಳಲ್ಲಿ ರಸ್ತೆಗಳಲ್ಲಿ ಗರಿಷ್ಠ ಸಂಖ್ಯೆಯ ವಿದ್ಯುತ್ ವಾಹನಗಳನ್ನು ಹೊಂದಲು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ವಿದ್ಯುತ್ ವಾಹನ ತಯಾರಿಕಾ ಕಂಪನಿಗಳಿಗೆ ಎಲ್ಲಾ ಅನುಕೂಲಗಳನ್ನು ಒದಗಿಸಲು ಸಾರಿಗೆ ಇಲಾಖೆ ಪ್ರಯತ್ನಿಸುತ್ತಿದೆ. ಅಂತಹ ವಾಹನಗಳ ಮಾಲೀಕರಿಗೂ ನಾವು ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

6 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

6 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

7 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

7 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

8 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

8 hours ago